ಬ್ರೇಕಿಂಗ್ ನ್ಯೂಸ್
12-11-24 03:12 pm Bangalore Correspondent ಕರ್ನಾಟಕ
ಬೆಂಗಳೂರು, ನ.12: ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹನ್ನೊಂದು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು ಆಸ್ತಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, ಬೆಳಗಾವಿ, ಹಾವೇರಿ, ದಾವಣಗೆರೆ, ಕಲಬುರಗಿ, ಮೈಸೂರು, ರಾಮನಗರ ಮತ್ತು ಧಾರವಾಡ ಸೇರಿದಂತೆ ಹಲವೆಡೆ ದಾಳಿ ನಡೆದಿದ್ದು, ಅಧಿಕಾರಿಗಳಿಗೆ ಸಂಬಂಧಿತ ದಾಖಲೆಗಳು, ಆಸ್ತಿ, ಬೆಲೆಬಾಳುವ ವಸ್ತುಗಳನ್ನು ಪರಿಶೀಲಿಸುತ್ತಿದ್ದಾರೆ. ದಾವಣಗೆರೆಯಲ್ಲಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆಗೆ ದಾಳಿಯಾಗಿದೆ. ಅನುಕಂಪದ ಆಧಾರದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ನೇಮಕಗೊಂಡಿದ್ದ ಕಮಲ್ ರಾಜ್ ಬಡ್ತಿ ಪಡೆದು ಸಹಾಯಕ ನಿರ್ದೇಶಕರಾಗಿದ್ದರು. ಚಿತ್ರದುರ್ಗ ಹಾಗೂ ದಾವಣೆಗೆರೆಯಲ್ಲಿ ಮನೆ, ಮೂರು ನಿವೇಶನ ಸೇರಿ ಇತರೆ ಆಸ್ತಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.


ಧಾರವಾಡದ ಕೆಐಎಡಿಬಿ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿರುವ ವೆಂಕಟೇಶ್ ಎಂಬವರ ಬೆಳಗಾವಿ ನಿವಾಸದ ಮೇಲೆ ದಾಳಿ ನಡೆದಿದೆ. ವೆಂಕಟೇಶ್ ಈ ಹಿಂದೆ ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸಿದ್ದರು.
ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರ ರೊಟ್ಟಿ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೀದರ್, ಬೆಂಗಳೂರು ನಿವಾಸ, ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ದಾಖಲೆ ಹಾಗೂ ಇನ್ನಿತರ ಮಾಹಿತಿ ಕಲೆ ಹಾಕಲಾಗಿದೆ.
ಹಾವೇರಿಯ ಬಸವೇಶ್ವರ ನಗರದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಉಪ ವಿಭಾಗದ ಎಇ ಕಾಶೀನಾಥ್ ಭಜಂತ್ರಿ ಮನೆ ಮೇಲೆ ದಾಳಿ ನಡೆದಿದ್ದು, 14 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಬೆಳಗ್ಗೆ ಮನೆಯಲ್ಲಿ ಮಲಗಿದ್ದ ಭಜಂತ್ರಿ, ಲೋಕಾಯುಕ್ತ ಅಧಿಕಾರಿಗಳ ದಾಳಿ ಸುಳಿವು ಸಿಗುತ್ತಿದ್ದಂತೆಯೇ ಸುಮಾರು 9 ಲಕ್ಷ ರೂ. ಹಣದ ಗಂಟನ್ನು ಕಿಟಿಕಿಯಿಂದ ಆಚೆ ಎಸೆದಿದ್ದಾರೆ. ಆದರೆ, ತಕ್ಷಣ ಗಮನಿಸಿದ ಲೋಕಾಯುಕ್ತ ಅಧಿಕಾರಿಗಳು ಅದನ್ನು ವಶಕ್ಕೆ ಪಡೆದಿದ್ದಾರೆ.
ರಾಣೆಬೆನ್ನೂರು ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿಯಾಗಿ ಕೆಲಸ ಮಾಡುತ್ತಿರುವ ಜ್ಯೋತಿ ಶಿಗ್ಲಿ ಅವರ ಮನೆಗೆ ದಾಳಿಯಾಗಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.
Karnataka Lokayukta on Tuesday morning launched surprise raids on nine government officials in different parts of the state. The simultaneous raids are underway in as many as 40 locations belonging to the suspects, officials said.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am