ಬ್ರೇಕಿಂಗ್ ನ್ಯೂಸ್
12-11-24 10:31 pm HK News Desk ಕರ್ನಾಟಕ
ಕಾರವಾರ, ನ.12: ಕಾರವಾರ ನಗರದಲ್ಲಿ ಪತ್ತೆಯಾದ ದೊಡ್ಡ ಜಾತಿಯ ರಣಹದ್ದು ಜನಸಾಮಾನ್ಯರನ್ನು ಬೆಚ್ಚಿಬೀಳಿಸಿತ್ತು. ಹದ್ದಿನ ಕಾಲಿನಲ್ಲಿ ಜಿಪಿಎಸ್ ಹಾಗೂ ಕ್ಯಾಮೆರಾ ಹೊಂದಿದ್ದನ್ನು ನೋಡಿದ ಸ್ಥಳೀಯರು ಗಾಬರಿಗೀಡಾಗಿದ್ದರು. ಭದ್ರತಾ ಸಿಬಂದಿಗೂ ಆತಂಕ ಎದುರಾಗಿತ್ತು.
ಕಳೆದ ಮೂರು ದಿನಗಳಿಂದ ಕಾರವಾರದ ಕೋಡಿಭಾಗ ಬಳಿಯ ನದಿ ಆಸುಪಾಸಿನಲ್ಲಿ ಹದ್ದಿನ ಹಾರಾಟ ಗಮನಿಸಿದ ಜನ, ಗೂಢಚಾರಿಕೆ ನಡೆಸಲು ಶತ್ರುಗಳು ಹದ್ದಿನಲ್ಲಿ ಕ್ಯಾಮರಾ ಅಳವಡಿಸಿ ಹಾರಲು ಬಿಟ್ಟಿದ್ದಾರೆ ಎಂಬ ಅನುಮಾನ ಪಟ್ಟಿದ್ದರು. ಹದ್ದಿನ ಕಾಲಿಗೆ ಇಲೆಕ್ಟ್ರಾನಿಕ್ ಚಿಪ್ ಅಳವಡಿಸಲಾಗಿತ್ತು. ಎರಡೂ ಕಾಲುಗಳಿಗೆ ಬಿಳಿ ಬಣ್ಣದ ಸ್ಟಿಕ್ಕರ್ ಹಾಕಲಾಗಿತ್ತು. ಪಕ್ಷಿಯ ಬೆನ್ನಿನಲ್ಲಿ ಸೋಲಾರ್ ಪ್ಲೇಟ್ ರೀತಿ ಕಾಣುವ ಚಿಪ್ ಕಂಡುಬಂದಿತ್ತು. ಇದೆಲ್ಲ ನೋಡಿದ ಜನರಿಗೆ ಅನುಮಾನ ಬಂದಿತ್ತು. ಕೈಗಾ ಅಣು ವಿದ್ಯುತ್ ಸ್ಥಾವರ, ಕದಂಬ ನೌಕಾನೆಲೆ ಇರುವುದರಿಂದ ರಹಸ್ಯ ಕಾರ್ಯಾಚರಣೆ ಬಗ್ಗೆ ಅನುಮಾನ ಮೂಡಿತ್ತು. ವಿಚಾರ ತಿಳಿಯುತ್ತಿದ್ದಂತೆ ಪಕ್ಷಿಯ ಮೇಲೆ ಅಧಿಕಾರಿಗಳು ತನಿಖೆ ನಡೆಸಿ ಅಸಲಿ ಸತ್ಯವನ್ನು ಹೊರ ತೆಗೆದಿದ್ದಾರೆ.
ಅರಣ್ಯ ಇಲಾಖೆಯವರೊಂದಿಗೆ ಸ್ಥಳಕ್ಕೆ ಹೋಗಿ ಬೈನಾಕ್ಯುಲರ್ ಮತ್ತು ಫೋಟೋಗ್ರಫಿ ಮೂಲಕ ಹದ್ದನ್ನು ಪರಿಶೀಲಿಸಲಾಗಿದೆ. ಹದ್ದಿಗೆ ಒಂದು ಲೇಬಲ್ ಅಂಟಿಸಲಾಗಿದ್ದು ಅದರಲ್ಲಿ ಇಂಗ್ಲಿಷನಲ್ಲಿ ‘If Found please contact ccffdtadobaz@mahaforest.gov.in OT10-4G s/n:245671 5033 2 ಎಂದು ಬರೆದಿರುತ್ತದೆ. ಇದು Himalayan Griffon Vulture ಜಾತಿಯ ದೊಡ್ಡ ರಣಹದ್ದಾಗಿದೆ. ಅಳಿವಿನ ಅಂಚಿನಲ್ಲಿರುವ ವಲಸೆ ಹಕ್ಕಿ. ಮಹಾರಾಷ್ಟ್ರ ಅರಣ್ಯ ಇಲಾಖೆಯವರು ರಕ್ಷಿಸಿ ಪೋಷಿಸುತ್ತಿದ್ದು ಹಾಗೂ ಮೇಲ್ವಿಚಾರಣೆ ಮಾಡುತ್ತಿದ್ದು ಪ್ರತಿ ವರ್ಷ ಇದು ಎಲ್ಲೆಲ್ಲಿ ವಲಸೆ ಹೋಗುತ್ತದೆ ಎಂದು ಅಧ್ಯಯನ ಮಾಡಲು ಜಿಪಿಎಸ್ ಅಳವಡಿಸಿರುತ್ತಾರೆ.
ರಣಹದ್ದು ಯಾವುದೇ ರೀತಿಯ ಗೂಢಚರ್ಯಕ್ಕೆ ಅಥವಾ ಇನ್ಯಾವುದೇ ಕುಕೃತ್ಯ ಕೆಲಸಕ್ಕೆ ಬಳಸಿದ್ದು ಅಲ್ಲ. ರಣಹದ್ದಿನ ಮೇಲೆ ಅರಣ್ಯ ಇಲಾಖೆಯವರು ನಿಗಾ ವಹಿಸಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಕಾರವಾರ ಪೊಲೀಸ್ ಇಲಾಖೆ ವಿನಂತಿಸಿದೆ.
Karwar, Uttara Kannada dist: An electronic device, attached to the back of a White-rumped vulture, created curiosity and concerns alike among the people at Nadivada near Kodibagh here.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm