ಬ್ರೇಕಿಂಗ್ ನ್ಯೂಸ್
13-11-24 12:37 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.13: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಶಕದ ಬಳಿಕ ನಕ್ಸಲರ ಹೆಜ್ಜೆ ಗುರುತು ಕಂಡುಬಂದಿದೆ. ಕೊಪ್ಪ ತಾಲೂಕಿನ ಕಡೇಗುಂದಿ ಗ್ರಾಮದ ಒಂಟಿ ಮನೆಗೆ ನಕ್ಸಲ್ ನಾಯಕರಾದ ಮುಂಡಗಾರು ಲತಾ ಮತ್ತು ಜಯಣ್ಣ ಅವರಿದ್ದ ನಾಲ್ವರು ನಕ್ಸಲರು ಭೇಟಿ ಕೊಟ್ಟಿದ್ದನ್ನು ತಿಳಿದ ಎಎನ್ಎಫ್ ಪಡೆ ದಾಳಿ ನಡೆಸಿದ್ದು ನಕ್ಸಲರು ಕಾಡಿನಲ್ಲಿ ಪರಾರಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವೇಶದ ಗಡಿಗಳಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಇದೇ ವೇಳೆ, ಕಾಡಂಚಿನ ಗ್ರಾಮಗಳಲ್ಲಿ ಎಎನ್ಎಫ್ ಪಡೆಗಳಿಂದ ಕಾರ್ಯಾಚರಣೆ ತೀವ್ರಗೊಂಡಿದೆ. ಕುದುರೆಮುಖ ಮುಖ, ಆಗುಂಬೆ, ಕೆರೆಕಟ್ಟೆ, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲ ಮಾದರಿಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾರೆ.
ಶೃಂಗೇರಿ ಮತ್ತು ಕೊಪ್ಪ ತಾಲೂಕಿನ ಗಡಿಯಲ್ಲಿರುವ ಸುಬ್ಬಗೌಡ ಎಂಬವರ ಮನೆಗೆ ನಾಲ್ವರು ನಕ್ಸಲರು ಬಂದಿದ್ದಾರೆಂಬ ಮಾಹಿತಿ ಮೇರೆಗೆ ಎಎನ್ಎಫ್ ಪೊಲೀಸರು ದಾಳಿ ನಡೆಸಿದ್ದಾರೆ. ಇದಕ್ಕೂ ಮೊದಲೇ ನಕ್ಸಲರು ಕಾಡಿನೊಳಗೆ ಪರಾರಿಯಾಗಿದ್ದಾರೆ. ಮನೆಯಲ್ಲಿ ಮೂರು ಬಂದೂಕು, ಮದ್ದುಗುಂಡು, ಮಾಂಸ ಪತ್ತೆಯಾಗಿದೆ. ಮನೆಯಲ್ಲಿ ನೇತು ಹಾಕಿದ್ದ ಕ್ಯಾಲೆಂಡರ್ ಗೆ ನಕ್ಷತ್ರ ಮಾದರಿಯ ಗುರುತು ಹಾಕಿದ್ದು ಪೊಲೀಸರು ಅದನ್ನು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಮುಂಡಗಾರು ಲತಾ ನೇತೃತ್ವದ ನಾಲ್ವರು ಬಂದಿದ್ದರೆಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಜಯಪುರ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆ ನಿಗ್ರಹ ಕಾಯ್ದೆಯಡಿ (ಯುಎಪಿಎ) ಪ್ರಕರಣ ದಾಖಲಿಸಲಾಗಿದೆ.
ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ, ನಕ್ಸಲ್ ನಿಗ್ರಹ ಪಡೆಯ ಎಸ್ಪಿ ಜಿತೇಂದ್ರ ಕುಮಾರ್ ಭೇಟಿ ನೀಡಿದ್ದು ಕಾರ್ಯಾಚರಣೆ ಚುರುಕುಗೊಳಿಸಲು ಸೂಚಿಸಿದ್ದಾರೆ. ಸ್ಥಳಕ್ಕೆ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಪ್ರಣಬ್ ಮೊಹಂತಿ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿದ್ದಾರೆ.
The anti-naxal force (ANF) has launched an extensive combing operation in the Sringeri and Koppa taluks of Chikkamagaluru district on the basis of intelligence reports suggesting renewed Maoist activity in the area, officials familiar with the matter said, adding that two have been detained for questioning.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 08:10 pm
Mangalore Correspondent
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm