ಬ್ರೇಕಿಂಗ್ ನ್ಯೂಸ್
13-11-24 06:45 pm HK News Desk ಕರ್ನಾಟಕ
Photo credits : Bar Bench
ಹುಬ್ಬಳ್ಳಿ, ನ.13: ಮಹತ್ವದ ಬೆಳವಣಿಗೆಯಲ್ಲಿ ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ವಿಭಾಗೀಯ ಪೀಠದಲ್ಲಿ ಜಾಮೀನು ಮಂಜೂರಾಗಿದೆ. ಆಮೂಲಕ ಜೈಲು ಸೇರಿದ್ದ 97 ಮಂದಿಯ ಕುಟುಂಬಗಳಲ್ಲಿ ಆಶಾಕಿರಣ ಮೂಡಿದೆ.
10 ವರ್ಷಗಳ ಹಿಂದೆ ನಡೆದ ದಲಿತರ ದೌರ್ಜನ್ಯ ಪ್ರಕರಣದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಕೊಪ್ಪಳ ಜಿಲ್ಲಾ ನ್ಯಾಯಾಲಯ 98 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ರಾಜ್ಯದಲ್ಲೇ ಅತಿ ಹೆಚ್ಚು ಮಂದಿಗೆ ಒಂದೇ ದಿನ ತೀರ್ಪು ಪ್ರಕಟಿಸಿದ್ದರಿಂದ ಐತಿಹಾಸಿಕ ತೀರ್ಪು ಎನ್ನಲಾಗಿತ್ತು. ಇಡೀ ಗ್ರಾಮದ ಬಹುತೇಕ ಮನೆಗಳ ಸದಸ್ಯರು ಜೈಲು ಪಾಲಾಗಿದ್ದರು. ಇದರಿಂದ ಹಳೆ ಪ್ರಕರಣ ನೆನೆದು ಕಣ್ಣೀರು ಹಾಕಿದ್ದರು. ಆನಂತರ, ನಾವೆಲ್ಲ ಜೊತೆಯಾಗೇ ವಾಸವಿದ್ದೆವು ಎಂದಿದ್ದರು. ಜಿಲ್ಲಾ ಕೋರ್ಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠವು 100 ಅಪರಾಧಿಗಳ ಪೈಕಿ 99 ಜನರಿಗೆ ಸದ್ಯಕ್ಕೆ ಮಧ್ಯಂತರ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಪೈಕಿ 97 ಮಂದಿ ಜೀವಾವಧಿ ಶಿಕ್ಷೆಯಾದವರು, ಸಾಮಾನ್ಯ ಶಿಕ್ಷೆಯಾಗಿದ್ದ ಇಬ್ಬರು ಇದ್ದಾರೆ. ಇನ್ನು ಪ್ರಕರಣದಲ್ಲಿ ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ ಹೊರತುಪಡಿಸಿ ಉಳಿದೆಲ್ಲರಿಗೂ ಜಾಮೀನು ಸಿಕ್ಕಿದೆ. ಶಿಕ್ಷೆಯ ವಿಚಾರದಲ್ಲಿ ವಿಚಾರಣೆ ಮುಂದುವರಿಯಲಿದೆ.
ಕೊಪ್ಪಳ ಗಂಗಾವತಿ ಮರಕುಂಬಿ ಗ್ರಾಮದಲ್ಲಿ 2014 ರಲ್ಲಿ ಕ್ಷೌರದಂಗಡಿಗೆ ಮತ್ತು ಹೋಟೆಲ್ನಲ್ಲಿ ದಲಿತರಿಗೆ ಪ್ರವೇಶ ನೀಡದ ವಿಚಾರದಲ್ಲಿ ಗಲಾಟೆ ನಡೆದಿತ್ತು. ಅದೇ ದಿನ ಮರಕುಂಬಿ ಗ್ರಾಮದ ಕೆಲ ಸರ್ವಣಿಯರು ಸಿನಿಮಾ ನೋಡಲು ಹೋದಾಗ ದಲಿತ ಯುವಕರು ಗಲಾಟೆ ನಡೆಸಿದ್ದರು. ಇದರ ಸಿಟ್ಟಿನಿಂದ ಅದೇ ದಿನ ರಾತ್ರಿ ದಲಿತರ ಕೇರಿಗೆ ನುಗ್ಗಿದ್ದ ಸರ್ವಣೀಯರು, ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಅದೃಷ್ಟಕ್ಕೆ ಯಾವುದೇ ಪ್ರಾಣ ಹಾನಿ ಆಗಿರಲಿಲ್ಲ. ಪ್ರಕರಣದಲ್ಲಿ 117 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಲವರು ತೀರಿಕೊಂಡಿದ್ದರೆ, ವಿಚಾರಣೆ ಬಳಿಕ ಕೊಪ್ಪಳ ಜಿಲ್ಲಾ ನ್ಯಾಯಾಲಯ 101 ಮಂದಿ ವಿರುದ್ಧ ಶಿಕ್ಷೆ ಘೋಷಣೆ ಮಾಡಿತ್ತು.
Marakumbi caste atrocity case, 97 persons get bail by court. The Principal District & Sessions Court in Koppal has convicted 101 persons in a decade-old case of atrocity against members of Scheduled Castes at Marakumbi village in Gangavati taluk of Koppal district in Karnataka.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm