ಬ್ರೇಕಿಂಗ್ ನ್ಯೂಸ್
13-11-24 06:45 pm HK News Desk ಕರ್ನಾಟಕ
Photo credits : Bar Bench
ಹುಬ್ಬಳ್ಳಿ, ನ.13: ಮಹತ್ವದ ಬೆಳವಣಿಗೆಯಲ್ಲಿ ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ವಿಭಾಗೀಯ ಪೀಠದಲ್ಲಿ ಜಾಮೀನು ಮಂಜೂರಾಗಿದೆ. ಆಮೂಲಕ ಜೈಲು ಸೇರಿದ್ದ 97 ಮಂದಿಯ ಕುಟುಂಬಗಳಲ್ಲಿ ಆಶಾಕಿರಣ ಮೂಡಿದೆ.
10 ವರ್ಷಗಳ ಹಿಂದೆ ನಡೆದ ದಲಿತರ ದೌರ್ಜನ್ಯ ಪ್ರಕರಣದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಕೊಪ್ಪಳ ಜಿಲ್ಲಾ ನ್ಯಾಯಾಲಯ 98 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ರಾಜ್ಯದಲ್ಲೇ ಅತಿ ಹೆಚ್ಚು ಮಂದಿಗೆ ಒಂದೇ ದಿನ ತೀರ್ಪು ಪ್ರಕಟಿಸಿದ್ದರಿಂದ ಐತಿಹಾಸಿಕ ತೀರ್ಪು ಎನ್ನಲಾಗಿತ್ತು. ಇಡೀ ಗ್ರಾಮದ ಬಹುತೇಕ ಮನೆಗಳ ಸದಸ್ಯರು ಜೈಲು ಪಾಲಾಗಿದ್ದರು. ಇದರಿಂದ ಹಳೆ ಪ್ರಕರಣ ನೆನೆದು ಕಣ್ಣೀರು ಹಾಕಿದ್ದರು. ಆನಂತರ, ನಾವೆಲ್ಲ ಜೊತೆಯಾಗೇ ವಾಸವಿದ್ದೆವು ಎಂದಿದ್ದರು. ಜಿಲ್ಲಾ ಕೋರ್ಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠವು 100 ಅಪರಾಧಿಗಳ ಪೈಕಿ 99 ಜನರಿಗೆ ಸದ್ಯಕ್ಕೆ ಮಧ್ಯಂತರ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಪೈಕಿ 97 ಮಂದಿ ಜೀವಾವಧಿ ಶಿಕ್ಷೆಯಾದವರು, ಸಾಮಾನ್ಯ ಶಿಕ್ಷೆಯಾಗಿದ್ದ ಇಬ್ಬರು ಇದ್ದಾರೆ. ಇನ್ನು ಪ್ರಕರಣದಲ್ಲಿ ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ ಹೊರತುಪಡಿಸಿ ಉಳಿದೆಲ್ಲರಿಗೂ ಜಾಮೀನು ಸಿಕ್ಕಿದೆ. ಶಿಕ್ಷೆಯ ವಿಚಾರದಲ್ಲಿ ವಿಚಾರಣೆ ಮುಂದುವರಿಯಲಿದೆ.
ಕೊಪ್ಪಳ ಗಂಗಾವತಿ ಮರಕುಂಬಿ ಗ್ರಾಮದಲ್ಲಿ 2014 ರಲ್ಲಿ ಕ್ಷೌರದಂಗಡಿಗೆ ಮತ್ತು ಹೋಟೆಲ್ನಲ್ಲಿ ದಲಿತರಿಗೆ ಪ್ರವೇಶ ನೀಡದ ವಿಚಾರದಲ್ಲಿ ಗಲಾಟೆ ನಡೆದಿತ್ತು. ಅದೇ ದಿನ ಮರಕುಂಬಿ ಗ್ರಾಮದ ಕೆಲ ಸರ್ವಣಿಯರು ಸಿನಿಮಾ ನೋಡಲು ಹೋದಾಗ ದಲಿತ ಯುವಕರು ಗಲಾಟೆ ನಡೆಸಿದ್ದರು. ಇದರ ಸಿಟ್ಟಿನಿಂದ ಅದೇ ದಿನ ರಾತ್ರಿ ದಲಿತರ ಕೇರಿಗೆ ನುಗ್ಗಿದ್ದ ಸರ್ವಣೀಯರು, ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಅದೃಷ್ಟಕ್ಕೆ ಯಾವುದೇ ಪ್ರಾಣ ಹಾನಿ ಆಗಿರಲಿಲ್ಲ. ಪ್ರಕರಣದಲ್ಲಿ 117 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಲವರು ತೀರಿಕೊಂಡಿದ್ದರೆ, ವಿಚಾರಣೆ ಬಳಿಕ ಕೊಪ್ಪಳ ಜಿಲ್ಲಾ ನ್ಯಾಯಾಲಯ 101 ಮಂದಿ ವಿರುದ್ಧ ಶಿಕ್ಷೆ ಘೋಷಣೆ ಮಾಡಿತ್ತು.
Marakumbi caste atrocity case, 97 persons get bail by court. The Principal District & Sessions Court in Koppal has convicted 101 persons in a decade-old case of atrocity against members of Scheduled Castes at Marakumbi village in Gangavati taluk of Koppal district in Karnataka.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm