ಬ್ರೇಕಿಂಗ್ ನ್ಯೂಸ್
13-11-24 07:07 pm Bangalore Correspondent ಕರ್ನಾಟಕ
ಬೆಂಗಳೂರು, ನ.13: ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾರವಾರ ಶಾಸಕ ಸತೀಶ್ ಸೈಲ್ ಹಾಗೂ ಇತರ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ರಿಲೀಫ್ ನೀಡಿದ್ದು ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್ ಆದೇಶ ನೀಡಿದೆ.
ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದ್ದು, ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತದಲ್ಲಿ ಶೇ. 25 ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಹೇಳಿದೆ. ಇದರಂತೆ, ಆರೋಪಿಗಳು ನ.14ರಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ತಮ್ಮ ಶಿಕ್ಷೆ ರದ್ದು ಪಡಿಸುವಂತೆ ಸತೀಶ್ ಸೈಲ್, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಹೈಕೋರ್ಟ್ ಸಿಬಿಐಗೆ ನೋಟಿಸ್ ಕೂಡ ಜಾರಿ ಮಾಡಿತ್ತು.
ಮೆಸರ್ಸ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈ ಲಿಮಿಟೆಡ್ ಮತ್ತು ಅದರ ಮಾಲಕ ಸತೀಶ್ ಸೈಲ್ ಪ್ರತ್ಯೇಕವಾಗಿ ಸಲ್ಲಿಸಿರುವ 6 ಅರ್ಜಿಗಳು, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಹಾಗೂ ಆಶಾಪುರ ಮೈನ್ಸ್ ಲಿಮಿಟೆಡ್, ಶ್ರೀ ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಾಡಿದ್ದು ಸದ್ಯಕ್ಕೆ ಶಿಕ್ಷೆಯನ್ನು ತತ್ಕಾಲಕ್ಕೆ ಅಮಾನತುಗೊಳಿಸಿದೆ.
ಅಂಕೋಲಾ ತಾಲೂಕಿನ ಬೇಲೆಕೇರಿಯಲ್ಲಿ 2009- 2010ರಲ್ಲಿ ಅರಣ್ಯಾಧಿಕಾರಿಗಳು 200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಸುಮಾರು 11,312 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಜಪ್ತಿ ಮಾಡಿದ್ದರು. ಈ ಅದಿರನ್ನು ಬೇಲೆಕೇರಿ ಬಂದರಿನ ಅಧಿಕಾರಿ ಮಹೇಶ್ ಬಿಳಿಯ ಅವರ ಸುಪರ್ದಿಗೆ ನೀಡಲಾಗಿತ್ತು. ಆದರೆ ಮಹೇಶ್ ಬಿಳಿಯ, ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳು ಸೇರಿ ಅದಿರನ್ನು ಕಳವುಗೈದು ಮಾರಾಟ ಮಾಡಿದ್ದರು.
Illegal export of seized iron case, Satish Sail gets stay on imprisonment. Mr. Sail and a few other convicts, who have also filed appeals against their conviction, have pleaded with the court to suspend their sentence and enlarge them on bail during the pendency of their appeals.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm