ಬ್ರೇಕಿಂಗ್ ನ್ಯೂಸ್
13-11-24 07:07 pm Bangalore Correspondent ಕರ್ನಾಟಕ
ಬೆಂಗಳೂರು, ನ.13: ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾರವಾರ ಶಾಸಕ ಸತೀಶ್ ಸೈಲ್ ಹಾಗೂ ಇತರ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ರಿಲೀಫ್ ನೀಡಿದ್ದು ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್ ಆದೇಶ ನೀಡಿದೆ.
ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದ್ದು, ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತದಲ್ಲಿ ಶೇ. 25 ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಹೇಳಿದೆ. ಇದರಂತೆ, ಆರೋಪಿಗಳು ನ.14ರಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ತಮ್ಮ ಶಿಕ್ಷೆ ರದ್ದು ಪಡಿಸುವಂತೆ ಸತೀಶ್ ಸೈಲ್, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಹೈಕೋರ್ಟ್ ಸಿಬಿಐಗೆ ನೋಟಿಸ್ ಕೂಡ ಜಾರಿ ಮಾಡಿತ್ತು.
ಮೆಸರ್ಸ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈ ಲಿಮಿಟೆಡ್ ಮತ್ತು ಅದರ ಮಾಲಕ ಸತೀಶ್ ಸೈಲ್ ಪ್ರತ್ಯೇಕವಾಗಿ ಸಲ್ಲಿಸಿರುವ 6 ಅರ್ಜಿಗಳು, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಹಾಗೂ ಆಶಾಪುರ ಮೈನ್ಸ್ ಲಿಮಿಟೆಡ್, ಶ್ರೀ ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಾಡಿದ್ದು ಸದ್ಯಕ್ಕೆ ಶಿಕ್ಷೆಯನ್ನು ತತ್ಕಾಲಕ್ಕೆ ಅಮಾನತುಗೊಳಿಸಿದೆ.
ಅಂಕೋಲಾ ತಾಲೂಕಿನ ಬೇಲೆಕೇರಿಯಲ್ಲಿ 2009- 2010ರಲ್ಲಿ ಅರಣ್ಯಾಧಿಕಾರಿಗಳು 200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಸುಮಾರು 11,312 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಜಪ್ತಿ ಮಾಡಿದ್ದರು. ಈ ಅದಿರನ್ನು ಬೇಲೆಕೇರಿ ಬಂದರಿನ ಅಧಿಕಾರಿ ಮಹೇಶ್ ಬಿಳಿಯ ಅವರ ಸುಪರ್ದಿಗೆ ನೀಡಲಾಗಿತ್ತು. ಆದರೆ ಮಹೇಶ್ ಬಿಳಿಯ, ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳು ಸೇರಿ ಅದಿರನ್ನು ಕಳವುಗೈದು ಮಾರಾಟ ಮಾಡಿದ್ದರು.
Illegal export of seized iron case, Satish Sail gets stay on imprisonment. Mr. Sail and a few other convicts, who have also filed appeals against their conviction, have pleaded with the court to suspend their sentence and enlarge them on bail during the pendency of their appeals.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am