ಬ್ರೇಕಿಂಗ್ ನ್ಯೂಸ್
14-11-24 10:08 pm Bangalore Correspondent ಕರ್ನಾಟಕ
ಬೆಂಗಳೂರು, ನ.14: ರಾಜ್ಯದ ಅಬಕಾರಿ ಸಚಿವರ ಲಂಚಾವತಾರಕ್ಕೆ ಬಾರ್, ವೈನ್ ಮಾಲೀಕರೇ ಬೇಸತ್ತಿದ್ದಾರೆ. ಈಗಾಗಲೇ ನಿರ್ಧಾರ ಮಾಡಿದಂತೆ, ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡುವುದು ಖಚಿತ ಎನ್ನುತ್ತಿದ್ದಾರೆ. ಹಿಂದೆಯೂ ಭ್ರಷ್ಟಾಚಾರ ಇತ್ತು. ಲಂಚವೂ ಇತ್ತು. ಆದರೆ, ಈಗಿನ ಕಾಲದಲ್ಲಿ ಲಂಚಾವತಾರ ಮಿತಿ ಮೀರಿದೆ ಎಂದು ಮದ್ಯವರ್ತಕರ ಸಂಘದ ಪದಾಧಿಕಾರಿಗಳೇ ಹೇಳುತ್ತಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಪ್ರತಿ ಮದ್ಯದಂಗಡಿಯಿಂದ ಹಿಡಿದು ಎಲ್ಲಾ ಜಿಲ್ಲೆಗಳಿಂದ ಇಂತಿಷ್ಟು ಹಣ ಫಿಕ್ಸ್ ಮಾಡಲಾಗಿದೆ. ವೈನ್ ಶಾಪ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಮದ್ಯದ ವರ್ತಕರಿಂದ ಇಂತಿಷ್ಟು ಹಣ ಫಿಕ್ಸ್ ಮಾಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಅಲ್ಲದೆ, ಅಬಕಾರಿ ಇಲಾಖೆಯ ಅಧಿಕಾರಿಗಳಿಂದಲೂ 16 ಕೋಟಿ ರೂ.ನಷ್ಟು ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.
ಬೆಂಗಳೂರಿನಲ್ಲಿ ಚುನಾವಣಾ ಉದ್ದೇಶಕ್ಕಾಗಿ ಅಕ್ರಮವಾಗಿ ಹಣ ವಸೂಲಿ ಮಾಡುವುದರ ಬಗ್ಗೆ ಬೃಹತ್ ಲಂಚ ಮತ್ತು ಅಕ್ರಮ ಹಣ ವರ್ಗಾವಣೆ ಎಂಬ ಶೀರ್ಷಿಕೆಯ ಪತ್ರವೊಂದು ಇತ್ತೀಚೆಗೆ ವೈರಲ್ ಆಗಿದ್ದಲ್ಲದೆ, ಹಿರಿಯ ಅಧಿಕಾರಿಗಳಿಂದ ಬರೋಬ್ಬರಿ 16 ಕೋಟಿ ರೂ. ಸಂಗ್ರಹಿಸಲಾಗಿದೆ ಎಂಬ ಆರೋಪ ಮಾಡಲಾಗಿತ್ತು. ಇದಲ್ಲದೆ, ಪ್ರತಿ ಮದ್ಯದಂಗಡಿ ಪರವಾನಗಿಗೆ ರೂ. 30-70 ಲಕ್ಷದ ವರೆಗೆ ಲಂಚ ಕೇಳಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಅಷ್ಟು ಲಂಚ ಕೊಟ್ಟ ನಂತರವೇ, ಸಚಿವರು CL7 ಬಾರ್ ಪರವಾನಗಿಗಳನ್ನು ನೀಡಿದ್ದಾರೆ ಎಂಬ ಆರೋಪ ಮಾಡಲಾಗುತ್ತಿದೆ.
ಮದ್ಯ ಮಾರಾಟಗಾರರು ಹೀಗೆ ಆರೋಪ ಮಾಡುತ್ತಿದ್ದಂತೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಧಿಕಾರದಲ್ಲಿದ್ದಾಗ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡದೇ ಇಲ್ಲವೇ ಎಂಬ ಪ್ರಶ್ನೆಗಳನ್ನು ಕಾಂಗ್ರೆಸಿಗರು ಮುಂದಿಡುತ್ತಿದ್ದಾರೆ. ಅದಕ್ಕೆ ಉತ್ತರವೆಂಬಂತೆ ಮದ್ಯ ಮಾರಟಗಾರರ ಸಂಘದ ಪದಾಧಿಕಾರಿಗಳು ನ.13ರಂದು ಮತ್ತೆ ಹೇಳಿಕೆ ನೀಡಿದ್ದಾರೆ. ಈ ಹಿಂದೆ, ನಾಗೇಶ್ ಅವರು ಅಬಕಾರಿ ಸಚಿವರಾಗಿದ್ದಾಗ ಹಾಗೂ ಅದಕ್ಕೂ ಹಿಂದಿನ ಎಲ್ಲಾ ಸಚಿವರ ಕಾಲಘಟ್ಟದಲ್ಲೂ ಲಂಚಾವತಾರ ಇದ್ದೇ ಇತ್ತು. ಆದರೀಗ, ಅದು ಮಿತಿ ಮೀರಿದೆ ಎಂಬ ಆರೋಪವನ್ನು ಮಾಡಿದ್ದು ಹಾಲಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಮೂತಿಗೆ ಮಂಗಳಾರತಿ ಮಾಡಿದಂತಾಗಿದೆ.
Alcohol sales will be suspended across Karnataka on November 20 as liquor vendors plan to protest ongoing issues with the state's Excise Department. The protest will take place despite there being no significant public holiday or special occasion, such as Gandhi Jayanti or the imposition of Section 144.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm