ಬ್ರೇಕಿಂಗ್ ನ್ಯೂಸ್
14-11-24 10:08 pm Bangalore Correspondent ಕರ್ನಾಟಕ
ಬೆಂಗಳೂರು, ನ.14: ರಾಜ್ಯದ ಅಬಕಾರಿ ಸಚಿವರ ಲಂಚಾವತಾರಕ್ಕೆ ಬಾರ್, ವೈನ್ ಮಾಲೀಕರೇ ಬೇಸತ್ತಿದ್ದಾರೆ. ಈಗಾಗಲೇ ನಿರ್ಧಾರ ಮಾಡಿದಂತೆ, ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡುವುದು ಖಚಿತ ಎನ್ನುತ್ತಿದ್ದಾರೆ. ಹಿಂದೆಯೂ ಭ್ರಷ್ಟಾಚಾರ ಇತ್ತು. ಲಂಚವೂ ಇತ್ತು. ಆದರೆ, ಈಗಿನ ಕಾಲದಲ್ಲಿ ಲಂಚಾವತಾರ ಮಿತಿ ಮೀರಿದೆ ಎಂದು ಮದ್ಯವರ್ತಕರ ಸಂಘದ ಪದಾಧಿಕಾರಿಗಳೇ ಹೇಳುತ್ತಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಪ್ರತಿ ಮದ್ಯದಂಗಡಿಯಿಂದ ಹಿಡಿದು ಎಲ್ಲಾ ಜಿಲ್ಲೆಗಳಿಂದ ಇಂತಿಷ್ಟು ಹಣ ಫಿಕ್ಸ್ ಮಾಡಲಾಗಿದೆ. ವೈನ್ ಶಾಪ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಮದ್ಯದ ವರ್ತಕರಿಂದ ಇಂತಿಷ್ಟು ಹಣ ಫಿಕ್ಸ್ ಮಾಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಅಲ್ಲದೆ, ಅಬಕಾರಿ ಇಲಾಖೆಯ ಅಧಿಕಾರಿಗಳಿಂದಲೂ 16 ಕೋಟಿ ರೂ.ನಷ್ಟು ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.
ಬೆಂಗಳೂರಿನಲ್ಲಿ ಚುನಾವಣಾ ಉದ್ದೇಶಕ್ಕಾಗಿ ಅಕ್ರಮವಾಗಿ ಹಣ ವಸೂಲಿ ಮಾಡುವುದರ ಬಗ್ಗೆ ಬೃಹತ್ ಲಂಚ ಮತ್ತು ಅಕ್ರಮ ಹಣ ವರ್ಗಾವಣೆ ಎಂಬ ಶೀರ್ಷಿಕೆಯ ಪತ್ರವೊಂದು ಇತ್ತೀಚೆಗೆ ವೈರಲ್ ಆಗಿದ್ದಲ್ಲದೆ, ಹಿರಿಯ ಅಧಿಕಾರಿಗಳಿಂದ ಬರೋಬ್ಬರಿ 16 ಕೋಟಿ ರೂ. ಸಂಗ್ರಹಿಸಲಾಗಿದೆ ಎಂಬ ಆರೋಪ ಮಾಡಲಾಗಿತ್ತು. ಇದಲ್ಲದೆ, ಪ್ರತಿ ಮದ್ಯದಂಗಡಿ ಪರವಾನಗಿಗೆ ರೂ. 30-70 ಲಕ್ಷದ ವರೆಗೆ ಲಂಚ ಕೇಳಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಅಷ್ಟು ಲಂಚ ಕೊಟ್ಟ ನಂತರವೇ, ಸಚಿವರು CL7 ಬಾರ್ ಪರವಾನಗಿಗಳನ್ನು ನೀಡಿದ್ದಾರೆ ಎಂಬ ಆರೋಪ ಮಾಡಲಾಗುತ್ತಿದೆ.
ಮದ್ಯ ಮಾರಾಟಗಾರರು ಹೀಗೆ ಆರೋಪ ಮಾಡುತ್ತಿದ್ದಂತೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಧಿಕಾರದಲ್ಲಿದ್ದಾಗ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡದೇ ಇಲ್ಲವೇ ಎಂಬ ಪ್ರಶ್ನೆಗಳನ್ನು ಕಾಂಗ್ರೆಸಿಗರು ಮುಂದಿಡುತ್ತಿದ್ದಾರೆ. ಅದಕ್ಕೆ ಉತ್ತರವೆಂಬಂತೆ ಮದ್ಯ ಮಾರಟಗಾರರ ಸಂಘದ ಪದಾಧಿಕಾರಿಗಳು ನ.13ರಂದು ಮತ್ತೆ ಹೇಳಿಕೆ ನೀಡಿದ್ದಾರೆ. ಈ ಹಿಂದೆ, ನಾಗೇಶ್ ಅವರು ಅಬಕಾರಿ ಸಚಿವರಾಗಿದ್ದಾಗ ಹಾಗೂ ಅದಕ್ಕೂ ಹಿಂದಿನ ಎಲ್ಲಾ ಸಚಿವರ ಕಾಲಘಟ್ಟದಲ್ಲೂ ಲಂಚಾವತಾರ ಇದ್ದೇ ಇತ್ತು. ಆದರೀಗ, ಅದು ಮಿತಿ ಮೀರಿದೆ ಎಂಬ ಆರೋಪವನ್ನು ಮಾಡಿದ್ದು ಹಾಲಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಮೂತಿಗೆ ಮಂಗಳಾರತಿ ಮಾಡಿದಂತಾಗಿದೆ.
Alcohol sales will be suspended across Karnataka on November 20 as liquor vendors plan to protest ongoing issues with the state's Excise Department. The protest will take place despite there being no significant public holiday or special occasion, such as Gandhi Jayanti or the imposition of Section 144.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm