ಬ್ರೇಕಿಂಗ್ ನ್ಯೂಸ್
14-11-24 10:08 pm Bangalore Correspondent ಕರ್ನಾಟಕ
ಬೆಂಗಳೂರು, ನ.14: ರಾಜ್ಯದ ಅಬಕಾರಿ ಸಚಿವರ ಲಂಚಾವತಾರಕ್ಕೆ ಬಾರ್, ವೈನ್ ಮಾಲೀಕರೇ ಬೇಸತ್ತಿದ್ದಾರೆ. ಈಗಾಗಲೇ ನಿರ್ಧಾರ ಮಾಡಿದಂತೆ, ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡುವುದು ಖಚಿತ ಎನ್ನುತ್ತಿದ್ದಾರೆ. ಹಿಂದೆಯೂ ಭ್ರಷ್ಟಾಚಾರ ಇತ್ತು. ಲಂಚವೂ ಇತ್ತು. ಆದರೆ, ಈಗಿನ ಕಾಲದಲ್ಲಿ ಲಂಚಾವತಾರ ಮಿತಿ ಮೀರಿದೆ ಎಂದು ಮದ್ಯವರ್ತಕರ ಸಂಘದ ಪದಾಧಿಕಾರಿಗಳೇ ಹೇಳುತ್ತಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಪ್ರತಿ ಮದ್ಯದಂಗಡಿಯಿಂದ ಹಿಡಿದು ಎಲ್ಲಾ ಜಿಲ್ಲೆಗಳಿಂದ ಇಂತಿಷ್ಟು ಹಣ ಫಿಕ್ಸ್ ಮಾಡಲಾಗಿದೆ. ವೈನ್ ಶಾಪ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಮದ್ಯದ ವರ್ತಕರಿಂದ ಇಂತಿಷ್ಟು ಹಣ ಫಿಕ್ಸ್ ಮಾಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಅಲ್ಲದೆ, ಅಬಕಾರಿ ಇಲಾಖೆಯ ಅಧಿಕಾರಿಗಳಿಂದಲೂ 16 ಕೋಟಿ ರೂ.ನಷ್ಟು ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.
ಬೆಂಗಳೂರಿನಲ್ಲಿ ಚುನಾವಣಾ ಉದ್ದೇಶಕ್ಕಾಗಿ ಅಕ್ರಮವಾಗಿ ಹಣ ವಸೂಲಿ ಮಾಡುವುದರ ಬಗ್ಗೆ ಬೃಹತ್ ಲಂಚ ಮತ್ತು ಅಕ್ರಮ ಹಣ ವರ್ಗಾವಣೆ ಎಂಬ ಶೀರ್ಷಿಕೆಯ ಪತ್ರವೊಂದು ಇತ್ತೀಚೆಗೆ ವೈರಲ್ ಆಗಿದ್ದಲ್ಲದೆ, ಹಿರಿಯ ಅಧಿಕಾರಿಗಳಿಂದ ಬರೋಬ್ಬರಿ 16 ಕೋಟಿ ರೂ. ಸಂಗ್ರಹಿಸಲಾಗಿದೆ ಎಂಬ ಆರೋಪ ಮಾಡಲಾಗಿತ್ತು. ಇದಲ್ಲದೆ, ಪ್ರತಿ ಮದ್ಯದಂಗಡಿ ಪರವಾನಗಿಗೆ ರೂ. 30-70 ಲಕ್ಷದ ವರೆಗೆ ಲಂಚ ಕೇಳಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಅಷ್ಟು ಲಂಚ ಕೊಟ್ಟ ನಂತರವೇ, ಸಚಿವರು CL7 ಬಾರ್ ಪರವಾನಗಿಗಳನ್ನು ನೀಡಿದ್ದಾರೆ ಎಂಬ ಆರೋಪ ಮಾಡಲಾಗುತ್ತಿದೆ.
ಮದ್ಯ ಮಾರಾಟಗಾರರು ಹೀಗೆ ಆರೋಪ ಮಾಡುತ್ತಿದ್ದಂತೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಧಿಕಾರದಲ್ಲಿದ್ದಾಗ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡದೇ ಇಲ್ಲವೇ ಎಂಬ ಪ್ರಶ್ನೆಗಳನ್ನು ಕಾಂಗ್ರೆಸಿಗರು ಮುಂದಿಡುತ್ತಿದ್ದಾರೆ. ಅದಕ್ಕೆ ಉತ್ತರವೆಂಬಂತೆ ಮದ್ಯ ಮಾರಟಗಾರರ ಸಂಘದ ಪದಾಧಿಕಾರಿಗಳು ನ.13ರಂದು ಮತ್ತೆ ಹೇಳಿಕೆ ನೀಡಿದ್ದಾರೆ. ಈ ಹಿಂದೆ, ನಾಗೇಶ್ ಅವರು ಅಬಕಾರಿ ಸಚಿವರಾಗಿದ್ದಾಗ ಹಾಗೂ ಅದಕ್ಕೂ ಹಿಂದಿನ ಎಲ್ಲಾ ಸಚಿವರ ಕಾಲಘಟ್ಟದಲ್ಲೂ ಲಂಚಾವತಾರ ಇದ್ದೇ ಇತ್ತು. ಆದರೀಗ, ಅದು ಮಿತಿ ಮೀರಿದೆ ಎಂಬ ಆರೋಪವನ್ನು ಮಾಡಿದ್ದು ಹಾಲಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಮೂತಿಗೆ ಮಂಗಳಾರತಿ ಮಾಡಿದಂತಾಗಿದೆ.
Alcohol sales will be suspended across Karnataka on November 20 as liquor vendors plan to protest ongoing issues with the state's Excise Department. The protest will take place despite there being no significant public holiday or special occasion, such as Gandhi Jayanti or the imposition of Section 144.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 08:10 pm
Mangalore Correspondent
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm