ಬ್ರೇಕಿಂಗ್ ನ್ಯೂಸ್
15-11-24 03:45 pm Bangalore Correspondent ಕರ್ನಾಟಕ
ಬೆಂಗಳೂರು, ನ.15: ಬಿಜೆಪಿ ಶಾಸಕ ಮುನಿರತ್ನ ಅವರ ಹನಿಟ್ರ್ಯಾಪ್ ಪ್ರಕರಣದಲ್ಲಿ ವಿಷಯ ಗೊತ್ತಿದ್ದರೂ ಮುಚ್ಚಿಟ್ಟು ಅಕ್ರಮಕ್ಕೆ ಸಹಕಾರ ನೀಡಿದ್ದ ಆರೋಪದಲ್ಲಿ ಹೆಬ್ಬಗೋಡಿ ಪೊಲೀಸ್ ಇನ್ ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿ ವಿಶೇಷ ತನಿಖಾ ದಳ (ಎಸ್ ಐಟಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯಲಾಗಿದೆ.
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಆಬಳಿಕ ಷರತ್ತಿನ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಒಂದೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಐಯಣ್ಣ ರೆಡ್ಡಿ, ಇದಕ್ಕೂ ಹಿಂದೆ ಮುನಿರತ್ನ ಅವರ ರಾಜರಾಜೇಶ್ವರಿ ಕ್ಷೇತ್ರ ವ್ಯಾಪ್ತಿಯ ರಾಜಗೋಪಾಲ ನಗರ, ಯಶವಂತಪುರ ಮತ್ತು ಪೀಣ್ಯ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸಿದ್ದರು. ಮುನಿರತ್ನ ನಡೆಸುತ್ತಿದ್ದ ಹನಿಟ್ರ್ಯಾಪ್ ಗೆ ಐಯಣ್ಣ ರೆಡ್ಡಿ ಸಹಕಾರ ನೀಡುತ್ತಿದ್ದರು ಎನ್ನಲಾಗಿದೆ. ಅಲ್ಲದೆ ಕೆಲವು ರಾಜಕಾರಣಿಗಳಿಗೆ ಏಡ್ಸ್ ಚುಚ್ಚುಮದ್ದು ನೀಡಲು ಸಂಚು ರೂಪಿಸಿದ್ದ ಸಂಗತಿ ತಿಳಿದಿದ್ದರೂ ಇನ್ ಸ್ಪೆಕ್ಟರ್ ರಹಸ್ಯ ಕಾಪಾಡಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ.
ಪ್ರಕರಣದ ಸಂತ್ರಸ್ತೆ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ ಅವರನ್ನು ಕೆಲವು ದಿನಗಳ ಹಿಂದೆ ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ ಇನ್ ಸ್ಪೆಕ್ಟರ್ ಒಳಸಂಚಿನ ಬಗ್ಗೆ ಮಾಹಿತಿ ನೀಡಿದ್ದರು. ಇದರಂತೆ, ಐಯಣ್ಣ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
A Bengaluru police inspector was arrested on Thursday by the Special Investigation Team (SIT) for allegedly assisting rape suspect BJP MLA Munirathna in multiple ‘criminal conspiracies.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm