ಬ್ರೇಕಿಂಗ್ ನ್ಯೂಸ್
19-11-24 11:05 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಅಬಕಾರಿ ಇಲಾಖೆಯ ಭ್ರಷ್ಟಾಚಾರ, ಲಂಚಕೋರ ಸಚಿವನ ವಿರುದ್ಧ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಮದ್ಯ ಮಾರಾಟಗಾರರ ಸಂಘ ಕರೆ ನೀಡಿತ್ತು. ಮಂಗಳವಾರ ತುರ್ತಾಗಿ ಮುಖ್ಯಮಂತ್ರಿಯವರು ಸಭೆ ಕರೆದು ಮಾತನಾಡಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರವನ್ನು ಮುಂದೂಡಿರುವುದಾಗಿ ಸಂಘದ ಪದಾಧಿಕಾರಿಗಳು ಪ್ರಕಟಿಸಿದ್ದಾರೆ.
ಇತ್ತೀಚೆಗೆ ಮದ್ಯ ಮಾರಾಟ ಸಂಘದ ಪ್ರತಿನಿಧಿಗಳು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ್ ವಿರುದ್ಧ ಭಾರೀ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿದ್ದರು. ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡುವುದಕ್ಕೂ ದೊಡ್ಡ ಮೊತ್ತದ ಲಂಚ ಪಡೆಯುತ್ತಿದ್ದಾರೆಂದು ಆರೋಪ ಕೇಳಿಬಂದಿತ್ತು. ಪ್ರತಿ ತಿಂಗಳು ಲಂಚ ಪಡೆಯುವ ವಿಚಾರವೂ ಚರ್ಚೆಯಾಗಿತ್ತು. ಇದನ್ನು ಖಂಡಿಸಿ ಮದ್ಯ ವ್ಯಾಪಾರಸ್ಥರು ಒಂದು ದಿನ ಮುಷ್ಕರ ಹೂಡುವ ಬೆದರಿಕೆ ಹಾಕಿದ್ದರು.
ಇದರಿಂದ ತೀವ್ರ ಕಸಿವಿಸಿಯಾಗಿದ್ದ ಕಾಂಗ್ರೆಸ್ ಸರ್ಕಾರವು ಮದ್ಯ ಮಾರಾಟ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಮದ್ಯ ವ್ಯಾಪಾರಸ್ಥರು ಬಂದ್ ಮಾಡುವುದಿಲ್ಲ ಎಂದಿದ್ದರೂ ರಾಜ್ಯ ಪ್ರತಿನಿಧಿಗಳು ಬಂದ್ ಗೆ ಕರೆ ನೀಡಿದ್ದರು. ಇದೀಗ ಸಿಎಂ ಭರವಸೆ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ಮುಂದೂಡಿಕೆ ಮಾಡಿದ್ದಾರೆ.
November 20th Liquor Trade Bandh postpone after CMs Promise in Mangalore.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm