ಬ್ರೇಕಿಂಗ್ ನ್ಯೂಸ್
19-11-24 11:05 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಅಬಕಾರಿ ಇಲಾಖೆಯ ಭ್ರಷ್ಟಾಚಾರ, ಲಂಚಕೋರ ಸಚಿವನ ವಿರುದ್ಧ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಮದ್ಯ ಮಾರಾಟಗಾರರ ಸಂಘ ಕರೆ ನೀಡಿತ್ತು. ಮಂಗಳವಾರ ತುರ್ತಾಗಿ ಮುಖ್ಯಮಂತ್ರಿಯವರು ಸಭೆ ಕರೆದು ಮಾತನಾಡಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರವನ್ನು ಮುಂದೂಡಿರುವುದಾಗಿ ಸಂಘದ ಪದಾಧಿಕಾರಿಗಳು ಪ್ರಕಟಿಸಿದ್ದಾರೆ.
ಇತ್ತೀಚೆಗೆ ಮದ್ಯ ಮಾರಾಟ ಸಂಘದ ಪ್ರತಿನಿಧಿಗಳು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ್ ವಿರುದ್ಧ ಭಾರೀ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿದ್ದರು. ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡುವುದಕ್ಕೂ ದೊಡ್ಡ ಮೊತ್ತದ ಲಂಚ ಪಡೆಯುತ್ತಿದ್ದಾರೆಂದು ಆರೋಪ ಕೇಳಿಬಂದಿತ್ತು. ಪ್ರತಿ ತಿಂಗಳು ಲಂಚ ಪಡೆಯುವ ವಿಚಾರವೂ ಚರ್ಚೆಯಾಗಿತ್ತು. ಇದನ್ನು ಖಂಡಿಸಿ ಮದ್ಯ ವ್ಯಾಪಾರಸ್ಥರು ಒಂದು ದಿನ ಮುಷ್ಕರ ಹೂಡುವ ಬೆದರಿಕೆ ಹಾಕಿದ್ದರು.
ಇದರಿಂದ ತೀವ್ರ ಕಸಿವಿಸಿಯಾಗಿದ್ದ ಕಾಂಗ್ರೆಸ್ ಸರ್ಕಾರವು ಮದ್ಯ ಮಾರಾಟ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಮದ್ಯ ವ್ಯಾಪಾರಸ್ಥರು ಬಂದ್ ಮಾಡುವುದಿಲ್ಲ ಎಂದಿದ್ದರೂ ರಾಜ್ಯ ಪ್ರತಿನಿಧಿಗಳು ಬಂದ್ ಗೆ ಕರೆ ನೀಡಿದ್ದರು. ಇದೀಗ ಸಿಎಂ ಭರವಸೆ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ಮುಂದೂಡಿಕೆ ಮಾಡಿದ್ದಾರೆ.
November 20th Liquor Trade Bandh postpone after CMs Promise in Mangalore.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am