ಬ್ರೇಕಿಂಗ್ ನ್ಯೂಸ್
20-11-24 09:57 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಶೋರೂಂನಲ್ಲಿ ಬೆಂಕಿ ಅನಾಹುತ ಸಂಭವಿಸಿ ಸೇಲ್ಸ್ ಮನ್ ಯುವತಿ ಸಜೀವ ದಹನವಾಗಿರುವ ಘಟನೆಯಿಂದ ರಾಜಧಾನಿ ಬೆಂಗಳೂರು ಬೆಚ್ಚಿಬಿದ್ದಿದೆ. ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಘಟನೆ ಸಂಬಂಧ ಯಾವುದೇ ಅಗ್ನಿ ಸುರಕ್ಷತೆ ಇಲ್ಲದೆ ಶೋರೂಂ ನಡೆಸುತ್ತಿದ್ದ ಮಾಲೀಕನನ್ನು ಪೊಲೀಸರು ಆದಷ್ಟು ಬೇಗ ಬಂಧಿಸಲಿ. ಮೃತ ಸಿಬ್ಬಂದಿಗೆ ಮಾಲೀಕರಿಂದಲೇ ದೇಣಿಗೆ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ (NOC) ಪಡೆಯದ ಹಾಗೂ ಅಗ್ನಿ ನಂದಿಸುವ ಉಪಕರಣಗಳನ್ನು ಹೊಂದಿರದ, ಫೈರ್ ಡ್ರಿಲ್ ಮಾಡಿಸದ ಯಾವುದೇ ಶೋರೂಂಗಳು, ಶಾಲಾ ಕಾಲೇಜುಗಳು, ಗೋಡೌನ್ಗಳಿದ್ದರೆ ಅಂತಹ ಕಟ್ಟಡಗಳ ಲೈಸನ್ಸ್ ರದ್ದು ಪಡಿಸಬೇಕು ಎಂದು ಯತ್ನಾಳ್ ಒತ್ತಾಯಿಸಿದ್ದಾರೆ.
ಫೈರ್ ಡ್ರಿಲ್ ಒಂದು ಮನೋರಂಜನಾ ಕಾರ್ಯವಾಗದೆ, ಕೆಲಸ ಮಾಡುವ ಸಿಬ್ಬಂದಿ ಅಗ್ನಿ ಆಕಸ್ಮಿಕ ಸಂಭವಿಸಿದರೆ ಹೇಗೆ ಎದುರಿಸಬೇಕು ಎಂಬುದನ್ನು ಸರಿಯಾಗಿ ಕಲಿತಿರಬೇಕು. ಫೈರ್ ಡ್ರಿಲ್ ಅನ್ನು ಆಸ್ಪತ್ರೆಗಳಲ್ಲಿ, ಅಗ್ನಿ ಸೂಕ್ಷ್ಮ ವಲಯಗಳಲ್ಲಿ, ಫ್ಯಾಕ್ಟರಿ, ಶಾಲಾ ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಡಬೇಕು. ಅಗ್ನಿ ನಂದಿಸುವ ಉಪಕರಣಗಳು ಇಲ್ಲದಿದ್ದರೆ ಕೂಡಲೇ ಅಂತಹ ಕಚೇರಿ ಅಥವಾ ವ್ಯಾಪಾರ ವಹಿವಾಟು ಕೇಂದ್ರದ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಯತ್ನಾಳ್ ಸಲಹೆ ನೀಡಿದ್ದಾರೆ.
ಬೆಂಗಳೂರಿನ ರಾಜಾಜಿನಗರದಲ್ಲಿರುವ ಎಲೆಕ್ಟ್ರಿಕ್ ವಾಹನ ಶೋರೂಂನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದರಿಂದ ಶೋರೂಂ ಒಳಗಿದ್ದ ಯುವತಿ ದಾರುಣ ಮೃತಪಟ್ಟಿದ್ದರು. ಶೋರೂಂನಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸದಿರುವುದು ತಿಳಿದುಬಂದಿದೆ. ರಾಜಾಜಿನಗರದ ರಾಜ್ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಈ ಘಟನೆ ಸಂಭವಿಸಿತ್ತು. ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿದ್ದು, ಕೆಲವೇ ನಿಮಿಷಗಳಲ್ಲಿ ವಾಹನಗಳು ಹೊತ್ತಿ ಉರಿದಿದ್ದವು. ಈ ವೇಳೆ ಶೋರೂಂನಲ್ಲಿ ಸೇಲ್ಸ್ ಎಕ್ಸಿಕ್ಯುಟಿವ್ ಆಗಿ ಕೆಲಸ ಮಾಡುತ್ತಿದ್ದ 20 ವರ್ಷದ ಪ್ರಿಯಾ ಅಲ್ಲಿಂದ ಹೊರಬರಲಾರದೆ ಸಾವಿಗೀಡಾಗಿದ್ದಾರೆ.
Fire accident at two wheeler electric showroom in Bangalore, yatnal demands cancellation of lisence.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm