ಬ್ರೇಕಿಂಗ್ ನ್ಯೂಸ್
21-11-24 09:32 pm Bangalore Correspondent ಕರ್ನಾಟಕ
ಬೆಂಗಳೂರು, ನ.21: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿ ಅಳವಡಿಕೆ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಸೆಲ್ಕೋ ಫೌಂಡೇಶನ್ ಸಹಯೋಗದಲ್ಲಿ ರಾಜ್ಯದ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಕೇಂದ್ರಗಳು ಸೇರಿದಂತೆ 500 ಆರೋಗ್ಯ ಕೇಂದ್ರಗಳಲ್ಲಿ 2026ರ ಒಳಗೆ ಸೌರ ವಿದ್ಯುತ್ ಅಳವಡಿಸುವ ಗುರಿ ಹೊಂದಲಾಗಿದೆ.
120 ಕೋಟಿ ವೆಚ್ವದಲ್ಲಿ ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ಸಿಎಸ್ ಆರ್ ಯೋಜನೆ ಅಡಿಯಲ್ಲಿ ಸೌರ ಶಕ್ತಿ ಅಳವಡಿಸಲಾಗುತ್ತಿದ್ದು, ಇದರಿಂದ 5 ಲಕ್ಷ ಯುನಿಟ್ ವಿದ್ಯುತ್ ಉಳಿತಾಯವಾಗಲಿದೆ. ಇದರಿಂದ ಪ್ರತಿ ತಿಂಗಳಿಗೆ 50 ಲಕ್ಷ ರೂ. ವಿದ್ಯುತ್ ಬಿಲ್ ನಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದ್ದು, 10 ವರ್ಷಗಳಲ್ಲಿ ಸರಿಸುಮಾರು 100 ಕೋಟಿಯಷ್ಟ ಹಣ ಸರ್ಕಾರದ ಬೊಕ್ಕಸಕ್ಕೆ ಉಳಿತಾಯವಾಗಲಿದೆ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸೆಲ್ಕೋ ಫೌಂಡೇಶನ್ ಆರೋಗ್ಯ ಇಲಾಖೆಯೊಂದಿಗೆ ನಿಜಕ್ಕೂ ಒಂದು ಕ್ರಾಂತಿಕಾರಿ ಹೆಜ್ಜೆಯಿಟ್ಟಿದೆ. ಈಗಾಗಲೇ ಪ್ರಥಮ ಹಂತದಲ್ಲಿ 1,152 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿ ಒದಗಿಸಲಾಗಿದ್ದು, ರಾಯಚೂರಿನಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳು ಸಂಪೂರ್ಣ ಸೌರಶಕ್ತಿ ಹೊಂದಿವೆ. ಇದರಿಂದಾಗಿ ಆರೋಗ್ಯ ಕೇಂದ್ರಗಳ ವಿದ್ಯುತ್ ಬಿಲ್ಗಳಲ್ಲಿ ಶೇಕಡ 70 ರಷ್ಟು ಉಳಿತಾಯವಾಗುತ್ತಿದೆ. ಈಗಾಗಲೇ ಸುಮಾರು 3 ಮೆಗಾ ವ್ಯಾಟ್ ಸೌರ ವಿದ್ಯುತ್ ಅನ್ನ ಆರೋಗ್ಯ ಕೇಂದ್ರಗಳಲ್ಲಿ ಉತ್ಪಾದಿಸಲಾಗಿದೆ. ಮುಂದಿನ 10 ವರ್ಷಗಳಲ್ಲಿ ರಾಜ್ಯ ಸರ್ಕಾರಕ್ಕೆ 100 ಕೋಟಿ ರೂ. ಉಳಿತಾಯ ಮಾಡುವ ಯೋಜನೆ ಅಳವಡಿಸಿಕೊಂಡಿರುವ ದೇಶದ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎಂದರು.
ಈ ಮಹತ್ವದ ಯೋಜನೆಯಿಂದಾಗಿ 2026ರ ವೇಳೆಗೆ ಕರ್ನಾಟಕದಾದ್ಯಂತ 5,000 ಆರೋಗ್ಯ ಕೇಂದ್ರಗಳಿಗೆ ಸೌರ ವಿದ್ಯುತ್ ಒದಗಿಸುವ ಗುರಿ ಹೊಂದಲಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಲು ಸಾಧ್ಯವಾಗಲಿದೆ. ಸುಸ್ಥಿರ ಶಕ್ತಿಯು ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸಲಿದೆ ಎಂದವರು ಹೇಳಿದ್ದಾರೆ.
ಯೋಜನೆಯ ಪ್ರಮುಖಾಂಶಗಳು
2026 ರ ವೇಳೆಗೆ 5000 ಆರೋಗ್ಯ ಕೇಂದ್ರಗಳಿಗೆ (3381 ಉಪ ಕೇಂದ್ರಗಳು, 1500 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 119 ತಾಲೂಕು ಆಸ್ಪತ್ರೆಗಳು) ಸೌರಶಕ್ತಿ ಅಳವಡಿಸಲಾಗುವುದು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬ್ಯಾಟರಿ ಆಧಾರಿತ ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ನಿರಂತರವಾಗಿ 24/7 ವಿದ್ಯುತ್ ದೊರೆಯಲಿದೆ.
'Saura Swasthya-2024' to install solar power in 5,000 health centers across the state. This project will ensure uninterrupted healthcare services in rural areas. In a first-of-its-kind initiative in the country, the Department of Health and Family Welfare, in collaboration with SELCO Foundation, is implementing this ambitious project.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am