ಬ್ರೇಕಿಂಗ್ ನ್ಯೂಸ್
24-11-24 08:39 pm Bangalore Correspondent ಕರ್ನಾಟಕ
ಬೆಂಗಳೂರು, ನ.24: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನೆರವು ನೀಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ 25,413 ಮತಗಳ ಅಂತರದಿಂದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು. ಈ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಜೆಡಿಎಸ್ ಬಿಜೆಪಿ ನೇತೃತ್ವದ ಎನ್ ಡಿಎ ಸೇರಿತ್ತು. ಒಂದು ವೇಳೆ ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನಮಗೆ ಬೆಂಬಲ ನೀಡಿರದಿದ್ದರೆ, ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬರುತ್ತಿರಲಿಲ್ಲ. ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಯೋಗೇಶ್ವರ್ ಗೆಲ್ತಾರೆ ಅಂತ ಗೊತ್ತಿತ್ತು ಅಂತ ಅಶ್ವಥ್ ನಾರಾಯಣ್ ಹೇಳಿಲ್ವಾ, ಇದರ ಅರ್ಥ ಏನು? ಎಂದು ಪ್ರಶ್ನಿಸಿದ ಡಿಸಿಎಂ ಡಿಕೆಶಿ, ಕ್ಷೇತ್ರ ಖಾಲಿ ಆದಾಗಿನಿಂದ ಸಾಕಷ್ಟು ಪ್ರವಾಸ ಮಾಡಿದೀವಿ. ಕ್ಷೇತ್ರದ ಜನರಿಗೆ ಏನು ಮಾತು ಕೊಟ್ಟಿದ್ದೆವೋ ಅದನ್ನ ಮೊದಲು ಜಾರಿ ಮಾಡಬೇಕು. ನಾನು ಯೋಗೇಶ್ವರ್ ಕೂತು ಚರ್ಚೆ ಮಾಡಿ ಇದಕ್ಕೆಲ್ಲ ಚಾಲನೆ ಕೊಡುತ್ತೇವೆ ಎಂದು ಭರವಸೆ ನೀಡಿದರು.
ವಿಧಾನಸಭೆಯಲ್ಲಿ 19 ಸ್ಥಾನಗಳನ್ನು ಹೊಂದಿದ್ದ ಜೆಡಿಎಸ್ ಈಗ 18ಕ್ಕೆ ಕುಸಿದಿದೆ ಎಂದು ವ್ಯಂಗ್ಯವಾಡಿದ ಅವರು, ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಸಿ.ಪಿ ಯೋಗೀಶ್ವರ್ ಪರ ಜನರ ತೀರ್ಪು ಇದಾಗಿದೆ ಎಂದು ಹೇಳಿದರು.
ಈ ಮಧ್ಯೆ ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಡಿಕೆ ಶಿವಕುಮಾರ್ ಈ ರೀತಿಯ ಹೇಳಿಕೆ ಮೂಲಕ ಬಿಜೆಪಿ ಮತ್ತು ಜೆಡಿಎಸ್ ನಡುವೆ ತಂದಿಕ್ಕುವ ಕೆಲಸ ಮಾಡುತ್ತಿದ್ದಾರೆ. ಅವರು ನಮ್ಮ ನಡುವೆ ಕೆರಳಿಸುವ ಪ್ರಯತ್ನ ಮಾಡಬಾರದು ಎಂದು ಹೇಳಿದರು. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ ಕೆ ಸುರೇಶ್ ಸೋಲಿಗೆ ಯಾರು ಹೊಣೆ? ಅದು ಕಾಂಗ್ರೆಸ್ ಅಲ್ಲವೇ? ಸಿದ್ದರಾಮಯ್ಯ ಅಲ್ಲವೇ? ಅದನ್ನು ಡಿಕೆ ಶಿವಕುಮಾರ್ ಒಪ್ಪಿಕೊಳ್ಳುತ್ತಾರೆಯೇ? ಅವರು ಒಪ್ಪಿಕೊಂಡರೆ ಅದರ ಬಗ್ಗೆ ಮಾತನಾಡುತ್ತೇನೆ ಅಶೋಕ್ ಹೇಳಿದರು.
Karnataka Deputy Chief Minister D K Shivakumar on Sunday hinted at cracks and squabbling within the BJP and the JD(S), as he gave credit to the leaders of these parties for the defeat of JD(S) candidate Nikhil Kumaraswamy in the Channapatna assembly bypoll.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm