ಬ್ರೇಕಿಂಗ್ ನ್ಯೂಸ್
25-11-24 05:51 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಜೆಡಿಎಸ್ ಶಾಸಕರು ತಮ್ಮ ಭವಿಷ್ಯ ಕಟ್ಟಿಕೊಳ್ಳಲು ಮನಸ್ಸು ಮಾಡಬೇಕು. ಜೆಡಿಎಸ್ ನಲ್ಲಿ ಭವಿಷ್ಯ ಇಲ್ಲ, ದೇವೆಗೌಡರು ಫೇಲ್ ಆಗಿದ್ದಾರೆ. ಹಳ್ಳಿ ಹಳ್ಳಿಗೆ ಬಂದು, ಪ್ರಚಾರ ಮಾಡಿದ್ರೂ ಜನ ಗೌರವ ಕೊಡಲಿಲ್ಲ. ಸಮುದಾಯ ಬೆಂಬಲ ಕೊಡಲಿಲ್ಲ. ಅವರ ಕುಟುಂಬ ರಾಜಕಾರಣವನ್ನು ಜನ ತಿರಸ್ಕರಿಸಿದ್ದಾರೆ. ಇನ್ನು ಯಾಕೆ ಈ ಸಮಾಜದ ಶಕ್ತಿ ಬಳಸಿಕೊಂಡು ಸ್ವಾರ್ಥಕ್ಕೆ ಬಳಕೆ ಮಾಡಿಕೊಳ್ತೀರಾ..? ಹೀಗೆಂದು ಚನ್ನಪಟ್ಟಣ ನೂತನ ಶಾಸಕ ಸಿಪಿ ಯೋಗೀಶ್ವರ್ ದೇವೇಗೌಡ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ.
ಜೆಡಿಎಸ್ ಕುಸಿತ ಕಾಣ್ತಿದೆ, ನಶಿಸಿ ಹೋಗ್ತಿದೆ. ಪಕ್ಷ ನಶಿಸಿಹೋದಾಗ, ಶಾಸಕರು ಬೇರೆ ಕಡೆ ಮುಖ ಮಾಡೋದು ಸಹಜ. ನನ್ನ ಪೂರ್ತಿ ಸಮಯ ನಾನು ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗ್ತೇನೆ. ಇಡೀ ಕುಟುಂಬ ನಿಂತು ಒಬ್ಬ ಸಾಮಾನ್ಯ ವ್ಯಕ್ತಿ ವಿರುದ್ದ ದಾಳಿ ಮಾಡಿದ್ರಲ್ಲ ಅನ್ನೋ ನೋವಿಂದ ಮಾತಾಡಿದ್ದೀನಿ. ನನಗೆ ಯಾರಾದ್ರೂ ಜವಾಬ್ದಾರಿ ಕೊಟ್ರೆ ಅಂತ ಜೆಡಿಎಸ್ ಶಾಸಕರನ್ನು ಕರೆತರುವ ವಿಚಾರ ಮಾತಾಡಿದ್ದೆ.
ಜೆಡಿಎಸ್ ಶಾಸಕರು ನಿಮ್ಮ ಸಂಪರ್ಕ ಮಾಡಿದ್ರಾ ಎಂಬ ಪ್ರಶ್ನೆಗೆ, ಕುಮಾರಸ್ವಾಮಿ ಅವರ ಆರ್ಭಟ, ಈ ಕುಯುಕ್ತಿ ರಾಜಕಾರಣಕ್ಕೆ ಇತಿಶ್ರೀ ಹಾಡಬೇಕು ಅಂತ ಈ ಮಾತು ಹೇಳಿದ್ದೇನೆ. ಕುಟುಂಬದ ಸ್ವಾರ್ಥಕ್ಕಾಗಿ ಒಕ್ಕಲಿಗರನ್ನು ಬಳಸಿಕೊಳ್ಳುತ್ತಿರುವುದನ್ನು ಹೇಳಿದ್ದೇನೆ ಎಂದಿದ್ದಾರೆ.
ಬಿಜೆಪಿ ಪಕ್ಷದಿಂದ ಆಚೆ ತಳ್ಳಲ್ಪಟ್ಟವನು. ನಾನೇನು ಬಿಜೆಪಿ ಬಿಟ್ಟು ಬರಲಿಲ್ಲ. ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಪಿತೂರಿಯಿಂದ ನಾನು ಆಚೆ ಬಂದಿದ್ದೇನೆ. ನಾನೆರನು ಅಲ್ಲಿಂದ, ಇಲ್ಲಿಂದ ಹಾರಿಕೊಂಡಿರೋನು ಅಲ್ಲ. ಅನಿವಾರ್ಯ ರಾಜಕೀಯ ಸ್ಥಿತಿ ನನ್ನನ್ನು ಆ ರೀತಿ ಮಾಡಿದೆ. ನಾನು ಕೊನೆ ದಿನದ ವರೆಗೂ ಕಾದು ರಾಜಕೀಯ ನಿರ್ಣಯ ತೆಗೆದುಕೊಂಡಿದ್ದೇನೆ. ನಾವು ಕಟ್ಟಿದ ಮನೆಯಿಂದ ಆಚೆ ಹಾಕಿದ ಮೇಲೆ ಬೇರೆ ಮನೆ ಹುಡುಕಿಕೊಳ್ಳಬೇಕು. ನಾನು ಪಕ್ಕಾ ಕಾಂಗ್ರೇಸ್ಸಿಗ,ನಾನು ಪಕ್ಷ ಬಿಡಲ್ಲ ಎಂದು ಹೇಳಿದರು.
ಜೆಡಿಎಸ್ ಅವರು ಸೋತು ಸುಣ್ಣ ಆಗಿದ್ದಾರಲ್ಲ. ಕುರುಕ್ಷೇತ್ರದಲ್ಲಿ ಬಭ್ರುವಾಹನ ಹೇಳ್ತಾನಲ್ಲಾ, ಮಗನನ್ನು ಯುದ್ದ ಭೂಮಿಗೆ ಕಳಿಸಿ ನೀನು ರಣಹೇಡಿ ಆಗ್ಬಿಟ್ಟೆ ಅಂತ. ಇವತ್ತು ಕೂಡ ಅದೇ ಪರಿಸ್ಥಿತಿ ಕುಮಾರಸ್ವಾಮಿಗಾಗಿದೆ. ತನ್ನ ಮಗನನ್ನೇ ಗೆಲ್ಲಿಸಿಕೊಂಡು ಬರಲಿಲ್ಲ ಅಂದ್ರೆ ಕೇಂದ್ರ ಸಚಿವ ಆಗಿ ಏನು ಪ್ರಯೋಜನ. ಕುಮಾರಸ್ವಾಮಿ ಭಂಡತನಕ್ಕೆ ಬೆಲೆ ತೆತ್ತಿದ್ದಾರೆ. ಅವರಿಗೆ ಇದ್ರೆ ಈ ಊರು, ಬಿಟ್ರೆ ಇನ್ನೊಂದು ಊರು ಎಂದು ಟಾಂಗ್ ಇಟ್ಟರು.
ಬೆಳಗಾವಿ ಸದನದಲ್ಲಿ ಎಲ್ಲಾ ಶಾಸಕರು ಸಿಗ್ತಾರೆ. ಅವರ ಹತ್ತಿರ ಮಾತಾಡ್ತೀನಿ, ಚರ್ಚೆ ಮಾಡ್ತೀನಿ. ಜೆಡಿಎಸ್ ಶಾಸಕರ ಜೊತೆಗೂ ಮಾತಾಡ್ತೀನಿ ಎಂದು ಶಾಸಕ ಸಿಪಿ ಯೋಗೀಶ್ವರ್ ಹೇಳಿದ್ದಾರೆ.
Former prime minister, 92-year-old HD Deve Gowda’s possibly last-ditch attempt to launch his favourite grandson Nikhil Kumaraswamy’s political career from Channapatna Assembly constituency ended in a fiasco, casting grave concerns about the future of the regional party launched by him – the Janata Dal
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm