ಬ್ರೇಕಿಂಗ್ ನ್ಯೂಸ್
26-11-24 10:23 pm HK News Desk ಕರ್ನಾಟಕ
ಶಿವಮೊಗ್ಗ, ನ.26: ಮಂಗನ ಕಾಯಿಲೆ ತಡೆಗಟ್ಟಲು ಆರಂಭದಿಂದಲೇ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಿವಮೊಗ್ಗ ಜಿಲ್ಲೆಯ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಗರ ತಾಲೂಕಿನ ಅರಳಗೋಡು, ತಲವಾಟ, ಹಿರೇಮನೆ ಸೇರಿದಂತೆ, ಶರಾವತಿ ಕಣಿವೆಯ ಅಂಚಿನ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಗ್ರಾಮಸ್ಥರ ಅಹವಾಲುಗಳನ್ನ ಸ್ವೀಕರಿಸಿದರು.
ಮಂಗನ ಕಾಯಿಲೆ ಕುರಿತಂತೆ ಗ್ರಾಮಸ್ಥರು ಈಗಿನಿಂದಲೇ ಹೆಚ್ಚಿನ ಜಾಗ್ರತೆ ವಹಿಸುವಂತೆ ಸೂಚನೆ ನೀಡಿದ ಸಚಿವರು, ಸರ್ಕಾರದಿಂದ ಅಗತ್ಯ ಆರೋಗ್ಯ ಸೇವೆ ಒದಗಿಸಲಾಗುವುದು. 2026 ಕ್ಕೆ ಕೆಎಫ್.ಡಿ ಗೆ ಲಸಿಕೆ ದೊರೆಯುವ ನಿರೀಕ್ಷೆಯಿದೆ. ಲಸಿಕೆ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಐಸಿಎಂಆರ್ ಜೊತೆ ಮಾತುಕತೆ ನಡೆಸಿ, ಸಾಧ್ಯವಾದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಮನವಿ ಮಾಡಲಾಗಿದೆ. ಅಲ್ಲಿಯ ವರೆಗೂ ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಜಾಗ್ರತೆ ವಹಿಸುವಂತೆ ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.



ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಂಗನ ಕಾಯಿಲೆಯಿಂದ ಯಾವುದೇ ಸಾವು ಆಗಬಾರದು. ಮಂಗನ ಕಾಯಲೆ ಗುಣಪಡಿಸಬಹುದಾದ ಕಾಯಿಲೆ. ಮುಂಜಾಗ್ರತೆ ವಹಿಸಿದರೆ ಸಾವುಗಳನ್ನ ತಡೆಯಬಹುದು. ಗ್ರಾಮಗಳಲ್ಲಿ ಜನರಿಗೆ ಮಂಗನ ಕಾಯಿಲೆ ಹರಡುವ ಕುರಿತಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯಗಳನ್ನ ಕೈಗೆತ್ತಿಕೊಳ್ಳಬೇಕು. ಸಿದ್ದಾಪುರ ಹಾಗೂ ಸಾಗರ ತಾಲೂಕಿನಲ್ಲಿ ಮಂಗನ ಕಾಯಿಲೆ ಕಳೆದ ವರ್ಷ ಹೆಚ್ಚು ಕಾಣಿಸಿಕೊಂಡಿತ್ತು. ಈ ಬಾರಿ ಮುಂಚಿತವಾಗಿಯೇ ಜಾಗ್ರತೆ ವಹಿಸಲಾಗುತ್ತಿದೆ ಎಂದರು.
ಕೆಎಫ್.ಡಿ ಪೀಡಿತ ಪ್ರದೇಶಗಳಿಗಾಗಿಯೇ ಪ್ರತ್ಯೇಕ ಸಂಚಾರಿ ಮೊಬೈಲ್ ಕ್ಲಿನಿಕ್ ನೀಡುವುದಾಗಿ ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗ್ರಾಮಸ್ಥರಿಗೆ ಭರವಸೆ ನೀಡಿದರು. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ವಿನ ಸೌಲಭ್ಯ ಒದಗಿಸುವುದರ ಜೊತೆಗೆ, ವೈದ್ಯರಿಗೆ ಸ್ಥಳೀಯ ಮಟ್ಟದಲ್ಲಿ ಉಳಿದುಕೊಳ್ಳಲು ಮೂಲಸೌಕರ್ಯಗಳನ್ನ ಕಲ್ಪಿಸಲಾಗುವುದು. ಬೇಸಿಗೆ ಸಂದರ್ಭದಲ್ಲಿ ಕಾಡಿಗೆ ಹೋಗುವ ಜನರು ಹೆಚ್ಚು ಎಚ್ಚರಿಕೆ ವಹಿಸಬೇಕು. ದೀಪದ ತೈಲವನ್ನ ಲೇಪಿಸಿಕೊಳ್ಳುಂತಹ ಕ್ರಮಗಳನ್ನ ಕೈಗೊಳ್ಳಬೇಕು. ಅಗತ್ಯ ಔಷಧಿಗಳ ಕೊರತೆಯಾಗದಂತೆ ಇಲಾಖೆ ವಿಶೇಷ ಗಮನ ಹರಿಸಲಿದೆ. ಗ್ರಾಮಸ್ಥರು ಮಂಗನ ಸಾವಿನ ಸುದ್ದಿ ತಿಳಿದಾಗ ತಕ್ಷಣ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao on Tuesday stated that Hyderabad-based Indian Immunologicals Limited is expected to come up with a new vaccine for Kyasanur Forest Disease (KFD), also known as Monkey fever, in 2026.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm