ಬ್ರೇಕಿಂಗ್ ನ್ಯೂಸ್
26-11-24 10:23 pm HK News Desk ಕರ್ನಾಟಕ
ಶಿವಮೊಗ್ಗ, ನ.26: ಮಂಗನ ಕಾಯಿಲೆ ತಡೆಗಟ್ಟಲು ಆರಂಭದಿಂದಲೇ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಿವಮೊಗ್ಗ ಜಿಲ್ಲೆಯ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಗರ ತಾಲೂಕಿನ ಅರಳಗೋಡು, ತಲವಾಟ, ಹಿರೇಮನೆ ಸೇರಿದಂತೆ, ಶರಾವತಿ ಕಣಿವೆಯ ಅಂಚಿನ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಗ್ರಾಮಸ್ಥರ ಅಹವಾಲುಗಳನ್ನ ಸ್ವೀಕರಿಸಿದರು.
ಮಂಗನ ಕಾಯಿಲೆ ಕುರಿತಂತೆ ಗ್ರಾಮಸ್ಥರು ಈಗಿನಿಂದಲೇ ಹೆಚ್ಚಿನ ಜಾಗ್ರತೆ ವಹಿಸುವಂತೆ ಸೂಚನೆ ನೀಡಿದ ಸಚಿವರು, ಸರ್ಕಾರದಿಂದ ಅಗತ್ಯ ಆರೋಗ್ಯ ಸೇವೆ ಒದಗಿಸಲಾಗುವುದು. 2026 ಕ್ಕೆ ಕೆಎಫ್.ಡಿ ಗೆ ಲಸಿಕೆ ದೊರೆಯುವ ನಿರೀಕ್ಷೆಯಿದೆ. ಲಸಿಕೆ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಐಸಿಎಂಆರ್ ಜೊತೆ ಮಾತುಕತೆ ನಡೆಸಿ, ಸಾಧ್ಯವಾದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಮನವಿ ಮಾಡಲಾಗಿದೆ. ಅಲ್ಲಿಯ ವರೆಗೂ ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಜಾಗ್ರತೆ ವಹಿಸುವಂತೆ ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.



ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಂಗನ ಕಾಯಿಲೆಯಿಂದ ಯಾವುದೇ ಸಾವು ಆಗಬಾರದು. ಮಂಗನ ಕಾಯಲೆ ಗುಣಪಡಿಸಬಹುದಾದ ಕಾಯಿಲೆ. ಮುಂಜಾಗ್ರತೆ ವಹಿಸಿದರೆ ಸಾವುಗಳನ್ನ ತಡೆಯಬಹುದು. ಗ್ರಾಮಗಳಲ್ಲಿ ಜನರಿಗೆ ಮಂಗನ ಕಾಯಿಲೆ ಹರಡುವ ಕುರಿತಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯಗಳನ್ನ ಕೈಗೆತ್ತಿಕೊಳ್ಳಬೇಕು. ಸಿದ್ದಾಪುರ ಹಾಗೂ ಸಾಗರ ತಾಲೂಕಿನಲ್ಲಿ ಮಂಗನ ಕಾಯಿಲೆ ಕಳೆದ ವರ್ಷ ಹೆಚ್ಚು ಕಾಣಿಸಿಕೊಂಡಿತ್ತು. ಈ ಬಾರಿ ಮುಂಚಿತವಾಗಿಯೇ ಜಾಗ್ರತೆ ವಹಿಸಲಾಗುತ್ತಿದೆ ಎಂದರು.
ಕೆಎಫ್.ಡಿ ಪೀಡಿತ ಪ್ರದೇಶಗಳಿಗಾಗಿಯೇ ಪ್ರತ್ಯೇಕ ಸಂಚಾರಿ ಮೊಬೈಲ್ ಕ್ಲಿನಿಕ್ ನೀಡುವುದಾಗಿ ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗ್ರಾಮಸ್ಥರಿಗೆ ಭರವಸೆ ನೀಡಿದರು. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ವಿನ ಸೌಲಭ್ಯ ಒದಗಿಸುವುದರ ಜೊತೆಗೆ, ವೈದ್ಯರಿಗೆ ಸ್ಥಳೀಯ ಮಟ್ಟದಲ್ಲಿ ಉಳಿದುಕೊಳ್ಳಲು ಮೂಲಸೌಕರ್ಯಗಳನ್ನ ಕಲ್ಪಿಸಲಾಗುವುದು. ಬೇಸಿಗೆ ಸಂದರ್ಭದಲ್ಲಿ ಕಾಡಿಗೆ ಹೋಗುವ ಜನರು ಹೆಚ್ಚು ಎಚ್ಚರಿಕೆ ವಹಿಸಬೇಕು. ದೀಪದ ತೈಲವನ್ನ ಲೇಪಿಸಿಕೊಳ್ಳುಂತಹ ಕ್ರಮಗಳನ್ನ ಕೈಗೊಳ್ಳಬೇಕು. ಅಗತ್ಯ ಔಷಧಿಗಳ ಕೊರತೆಯಾಗದಂತೆ ಇಲಾಖೆ ವಿಶೇಷ ಗಮನ ಹರಿಸಲಿದೆ. ಗ್ರಾಮಸ್ಥರು ಮಂಗನ ಸಾವಿನ ಸುದ್ದಿ ತಿಳಿದಾಗ ತಕ್ಷಣ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao on Tuesday stated that Hyderabad-based Indian Immunologicals Limited is expected to come up with a new vaccine for Kyasanur Forest Disease (KFD), also known as Monkey fever, in 2026.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm