ಬ್ರೇಕಿಂಗ್ ನ್ಯೂಸ್
26-11-24 10:23 pm HK News Desk ಕರ್ನಾಟಕ
ಶಿವಮೊಗ್ಗ, ನ.26: ಮಂಗನ ಕಾಯಿಲೆ ತಡೆಗಟ್ಟಲು ಆರಂಭದಿಂದಲೇ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಿವಮೊಗ್ಗ ಜಿಲ್ಲೆಯ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಗರ ತಾಲೂಕಿನ ಅರಳಗೋಡು, ತಲವಾಟ, ಹಿರೇಮನೆ ಸೇರಿದಂತೆ, ಶರಾವತಿ ಕಣಿವೆಯ ಅಂಚಿನ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಗ್ರಾಮಸ್ಥರ ಅಹವಾಲುಗಳನ್ನ ಸ್ವೀಕರಿಸಿದರು.
ಮಂಗನ ಕಾಯಿಲೆ ಕುರಿತಂತೆ ಗ್ರಾಮಸ್ಥರು ಈಗಿನಿಂದಲೇ ಹೆಚ್ಚಿನ ಜಾಗ್ರತೆ ವಹಿಸುವಂತೆ ಸೂಚನೆ ನೀಡಿದ ಸಚಿವರು, ಸರ್ಕಾರದಿಂದ ಅಗತ್ಯ ಆರೋಗ್ಯ ಸೇವೆ ಒದಗಿಸಲಾಗುವುದು. 2026 ಕ್ಕೆ ಕೆಎಫ್.ಡಿ ಗೆ ಲಸಿಕೆ ದೊರೆಯುವ ನಿರೀಕ್ಷೆಯಿದೆ. ಲಸಿಕೆ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಐಸಿಎಂಆರ್ ಜೊತೆ ಮಾತುಕತೆ ನಡೆಸಿ, ಸಾಧ್ಯವಾದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಮನವಿ ಮಾಡಲಾಗಿದೆ. ಅಲ್ಲಿಯ ವರೆಗೂ ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಜಾಗ್ರತೆ ವಹಿಸುವಂತೆ ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಂಗನ ಕಾಯಿಲೆಯಿಂದ ಯಾವುದೇ ಸಾವು ಆಗಬಾರದು. ಮಂಗನ ಕಾಯಲೆ ಗುಣಪಡಿಸಬಹುದಾದ ಕಾಯಿಲೆ. ಮುಂಜಾಗ್ರತೆ ವಹಿಸಿದರೆ ಸಾವುಗಳನ್ನ ತಡೆಯಬಹುದು. ಗ್ರಾಮಗಳಲ್ಲಿ ಜನರಿಗೆ ಮಂಗನ ಕಾಯಿಲೆ ಹರಡುವ ಕುರಿತಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯಗಳನ್ನ ಕೈಗೆತ್ತಿಕೊಳ್ಳಬೇಕು. ಸಿದ್ದಾಪುರ ಹಾಗೂ ಸಾಗರ ತಾಲೂಕಿನಲ್ಲಿ ಮಂಗನ ಕಾಯಿಲೆ ಕಳೆದ ವರ್ಷ ಹೆಚ್ಚು ಕಾಣಿಸಿಕೊಂಡಿತ್ತು. ಈ ಬಾರಿ ಮುಂಚಿತವಾಗಿಯೇ ಜಾಗ್ರತೆ ವಹಿಸಲಾಗುತ್ತಿದೆ ಎಂದರು.
ಕೆಎಫ್.ಡಿ ಪೀಡಿತ ಪ್ರದೇಶಗಳಿಗಾಗಿಯೇ ಪ್ರತ್ಯೇಕ ಸಂಚಾರಿ ಮೊಬೈಲ್ ಕ್ಲಿನಿಕ್ ನೀಡುವುದಾಗಿ ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗ್ರಾಮಸ್ಥರಿಗೆ ಭರವಸೆ ನೀಡಿದರು. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ವಿನ ಸೌಲಭ್ಯ ಒದಗಿಸುವುದರ ಜೊತೆಗೆ, ವೈದ್ಯರಿಗೆ ಸ್ಥಳೀಯ ಮಟ್ಟದಲ್ಲಿ ಉಳಿದುಕೊಳ್ಳಲು ಮೂಲಸೌಕರ್ಯಗಳನ್ನ ಕಲ್ಪಿಸಲಾಗುವುದು. ಬೇಸಿಗೆ ಸಂದರ್ಭದಲ್ಲಿ ಕಾಡಿಗೆ ಹೋಗುವ ಜನರು ಹೆಚ್ಚು ಎಚ್ಚರಿಕೆ ವಹಿಸಬೇಕು. ದೀಪದ ತೈಲವನ್ನ ಲೇಪಿಸಿಕೊಳ್ಳುಂತಹ ಕ್ರಮಗಳನ್ನ ಕೈಗೊಳ್ಳಬೇಕು. ಅಗತ್ಯ ಔಷಧಿಗಳ ಕೊರತೆಯಾಗದಂತೆ ಇಲಾಖೆ ವಿಶೇಷ ಗಮನ ಹರಿಸಲಿದೆ. ಗ್ರಾಮಸ್ಥರು ಮಂಗನ ಸಾವಿನ ಸುದ್ದಿ ತಿಳಿದಾಗ ತಕ್ಷಣ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao on Tuesday stated that Hyderabad-based Indian Immunologicals Limited is expected to come up with a new vaccine for Kyasanur Forest Disease (KFD), also known as Monkey fever, in 2026.
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm