ಬ್ರೇಕಿಂಗ್ ನ್ಯೂಸ್
26-11-24 10:23 pm HK News Desk ಕರ್ನಾಟಕ
ಶಿವಮೊಗ್ಗ, ನ.26: ಮಂಗನ ಕಾಯಿಲೆ ತಡೆಗಟ್ಟಲು ಆರಂಭದಿಂದಲೇ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಿವಮೊಗ್ಗ ಜಿಲ್ಲೆಯ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಗರ ತಾಲೂಕಿನ ಅರಳಗೋಡು, ತಲವಾಟ, ಹಿರೇಮನೆ ಸೇರಿದಂತೆ, ಶರಾವತಿ ಕಣಿವೆಯ ಅಂಚಿನ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಗ್ರಾಮಸ್ಥರ ಅಹವಾಲುಗಳನ್ನ ಸ್ವೀಕರಿಸಿದರು.
ಮಂಗನ ಕಾಯಿಲೆ ಕುರಿತಂತೆ ಗ್ರಾಮಸ್ಥರು ಈಗಿನಿಂದಲೇ ಹೆಚ್ಚಿನ ಜಾಗ್ರತೆ ವಹಿಸುವಂತೆ ಸೂಚನೆ ನೀಡಿದ ಸಚಿವರು, ಸರ್ಕಾರದಿಂದ ಅಗತ್ಯ ಆರೋಗ್ಯ ಸೇವೆ ಒದಗಿಸಲಾಗುವುದು. 2026 ಕ್ಕೆ ಕೆಎಫ್.ಡಿ ಗೆ ಲಸಿಕೆ ದೊರೆಯುವ ನಿರೀಕ್ಷೆಯಿದೆ. ಲಸಿಕೆ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಐಸಿಎಂಆರ್ ಜೊತೆ ಮಾತುಕತೆ ನಡೆಸಿ, ಸಾಧ್ಯವಾದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಮನವಿ ಮಾಡಲಾಗಿದೆ. ಅಲ್ಲಿಯ ವರೆಗೂ ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಜಾಗ್ರತೆ ವಹಿಸುವಂತೆ ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.



ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಂಗನ ಕಾಯಿಲೆಯಿಂದ ಯಾವುದೇ ಸಾವು ಆಗಬಾರದು. ಮಂಗನ ಕಾಯಲೆ ಗುಣಪಡಿಸಬಹುದಾದ ಕಾಯಿಲೆ. ಮುಂಜಾಗ್ರತೆ ವಹಿಸಿದರೆ ಸಾವುಗಳನ್ನ ತಡೆಯಬಹುದು. ಗ್ರಾಮಗಳಲ್ಲಿ ಜನರಿಗೆ ಮಂಗನ ಕಾಯಿಲೆ ಹರಡುವ ಕುರಿತಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯಗಳನ್ನ ಕೈಗೆತ್ತಿಕೊಳ್ಳಬೇಕು. ಸಿದ್ದಾಪುರ ಹಾಗೂ ಸಾಗರ ತಾಲೂಕಿನಲ್ಲಿ ಮಂಗನ ಕಾಯಿಲೆ ಕಳೆದ ವರ್ಷ ಹೆಚ್ಚು ಕಾಣಿಸಿಕೊಂಡಿತ್ತು. ಈ ಬಾರಿ ಮುಂಚಿತವಾಗಿಯೇ ಜಾಗ್ರತೆ ವಹಿಸಲಾಗುತ್ತಿದೆ ಎಂದರು.
ಕೆಎಫ್.ಡಿ ಪೀಡಿತ ಪ್ರದೇಶಗಳಿಗಾಗಿಯೇ ಪ್ರತ್ಯೇಕ ಸಂಚಾರಿ ಮೊಬೈಲ್ ಕ್ಲಿನಿಕ್ ನೀಡುವುದಾಗಿ ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗ್ರಾಮಸ್ಥರಿಗೆ ಭರವಸೆ ನೀಡಿದರು. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ವಿನ ಸೌಲಭ್ಯ ಒದಗಿಸುವುದರ ಜೊತೆಗೆ, ವೈದ್ಯರಿಗೆ ಸ್ಥಳೀಯ ಮಟ್ಟದಲ್ಲಿ ಉಳಿದುಕೊಳ್ಳಲು ಮೂಲಸೌಕರ್ಯಗಳನ್ನ ಕಲ್ಪಿಸಲಾಗುವುದು. ಬೇಸಿಗೆ ಸಂದರ್ಭದಲ್ಲಿ ಕಾಡಿಗೆ ಹೋಗುವ ಜನರು ಹೆಚ್ಚು ಎಚ್ಚರಿಕೆ ವಹಿಸಬೇಕು. ದೀಪದ ತೈಲವನ್ನ ಲೇಪಿಸಿಕೊಳ್ಳುಂತಹ ಕ್ರಮಗಳನ್ನ ಕೈಗೊಳ್ಳಬೇಕು. ಅಗತ್ಯ ಔಷಧಿಗಳ ಕೊರತೆಯಾಗದಂತೆ ಇಲಾಖೆ ವಿಶೇಷ ಗಮನ ಹರಿಸಲಿದೆ. ಗ್ರಾಮಸ್ಥರು ಮಂಗನ ಸಾವಿನ ಸುದ್ದಿ ತಿಳಿದಾಗ ತಕ್ಷಣ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao on Tuesday stated that Hyderabad-based Indian Immunologicals Limited is expected to come up with a new vaccine for Kyasanur Forest Disease (KFD), also known as Monkey fever, in 2026.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am