ಬ್ರೇಕಿಂಗ್ ನ್ಯೂಸ್
26-11-24 10:23 pm HK News Desk ಕರ್ನಾಟಕ
ಶಿವಮೊಗ್ಗ, ನ.26: ಮಂಗನ ಕಾಯಿಲೆ ತಡೆಗಟ್ಟಲು ಆರಂಭದಿಂದಲೇ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಿವಮೊಗ್ಗ ಜಿಲ್ಲೆಯ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಗರ ತಾಲೂಕಿನ ಅರಳಗೋಡು, ತಲವಾಟ, ಹಿರೇಮನೆ ಸೇರಿದಂತೆ, ಶರಾವತಿ ಕಣಿವೆಯ ಅಂಚಿನ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಗ್ರಾಮಸ್ಥರ ಅಹವಾಲುಗಳನ್ನ ಸ್ವೀಕರಿಸಿದರು.
ಮಂಗನ ಕಾಯಿಲೆ ಕುರಿತಂತೆ ಗ್ರಾಮಸ್ಥರು ಈಗಿನಿಂದಲೇ ಹೆಚ್ಚಿನ ಜಾಗ್ರತೆ ವಹಿಸುವಂತೆ ಸೂಚನೆ ನೀಡಿದ ಸಚಿವರು, ಸರ್ಕಾರದಿಂದ ಅಗತ್ಯ ಆರೋಗ್ಯ ಸೇವೆ ಒದಗಿಸಲಾಗುವುದು. 2026 ಕ್ಕೆ ಕೆಎಫ್.ಡಿ ಗೆ ಲಸಿಕೆ ದೊರೆಯುವ ನಿರೀಕ್ಷೆಯಿದೆ. ಲಸಿಕೆ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಐಸಿಎಂಆರ್ ಜೊತೆ ಮಾತುಕತೆ ನಡೆಸಿ, ಸಾಧ್ಯವಾದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಮನವಿ ಮಾಡಲಾಗಿದೆ. ಅಲ್ಲಿಯ ವರೆಗೂ ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಜಾಗ್ರತೆ ವಹಿಸುವಂತೆ ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.



ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಂಗನ ಕಾಯಿಲೆಯಿಂದ ಯಾವುದೇ ಸಾವು ಆಗಬಾರದು. ಮಂಗನ ಕಾಯಲೆ ಗುಣಪಡಿಸಬಹುದಾದ ಕಾಯಿಲೆ. ಮುಂಜಾಗ್ರತೆ ವಹಿಸಿದರೆ ಸಾವುಗಳನ್ನ ತಡೆಯಬಹುದು. ಗ್ರಾಮಗಳಲ್ಲಿ ಜನರಿಗೆ ಮಂಗನ ಕಾಯಿಲೆ ಹರಡುವ ಕುರಿತಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯಗಳನ್ನ ಕೈಗೆತ್ತಿಕೊಳ್ಳಬೇಕು. ಸಿದ್ದಾಪುರ ಹಾಗೂ ಸಾಗರ ತಾಲೂಕಿನಲ್ಲಿ ಮಂಗನ ಕಾಯಿಲೆ ಕಳೆದ ವರ್ಷ ಹೆಚ್ಚು ಕಾಣಿಸಿಕೊಂಡಿತ್ತು. ಈ ಬಾರಿ ಮುಂಚಿತವಾಗಿಯೇ ಜಾಗ್ರತೆ ವಹಿಸಲಾಗುತ್ತಿದೆ ಎಂದರು.
ಕೆಎಫ್.ಡಿ ಪೀಡಿತ ಪ್ರದೇಶಗಳಿಗಾಗಿಯೇ ಪ್ರತ್ಯೇಕ ಸಂಚಾರಿ ಮೊಬೈಲ್ ಕ್ಲಿನಿಕ್ ನೀಡುವುದಾಗಿ ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗ್ರಾಮಸ್ಥರಿಗೆ ಭರವಸೆ ನೀಡಿದರು. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ವಿನ ಸೌಲಭ್ಯ ಒದಗಿಸುವುದರ ಜೊತೆಗೆ, ವೈದ್ಯರಿಗೆ ಸ್ಥಳೀಯ ಮಟ್ಟದಲ್ಲಿ ಉಳಿದುಕೊಳ್ಳಲು ಮೂಲಸೌಕರ್ಯಗಳನ್ನ ಕಲ್ಪಿಸಲಾಗುವುದು. ಬೇಸಿಗೆ ಸಂದರ್ಭದಲ್ಲಿ ಕಾಡಿಗೆ ಹೋಗುವ ಜನರು ಹೆಚ್ಚು ಎಚ್ಚರಿಕೆ ವಹಿಸಬೇಕು. ದೀಪದ ತೈಲವನ್ನ ಲೇಪಿಸಿಕೊಳ್ಳುಂತಹ ಕ್ರಮಗಳನ್ನ ಕೈಗೊಳ್ಳಬೇಕು. ಅಗತ್ಯ ಔಷಧಿಗಳ ಕೊರತೆಯಾಗದಂತೆ ಇಲಾಖೆ ವಿಶೇಷ ಗಮನ ಹರಿಸಲಿದೆ. ಗ್ರಾಮಸ್ಥರು ಮಂಗನ ಸಾವಿನ ಸುದ್ದಿ ತಿಳಿದಾಗ ತಕ್ಷಣ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao on Tuesday stated that Hyderabad-based Indian Immunologicals Limited is expected to come up with a new vaccine for Kyasanur Forest Disease (KFD), also known as Monkey fever, in 2026.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm