ಬ್ರೇಕಿಂಗ್ ನ್ಯೂಸ್
26-11-24 10:46 pm Bangalore Correspondent ಕರ್ನಾಟಕ
ಬೆಂಗಳೂರು, ನ 26: “ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟಿಸ್ ನೀಡಲಾಗುವುದು” ಎಂದು ಡಿ. ಕೆ ಶಿವಕುಮಾರ್ ತಿಳಿಸಿದ್ದಾರೆ.
ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದೇವೆ ಎಂಬ ಶಾಸಕ ಗವಿಯಪ್ಪ ಅವರ ಹೇಳಿಕೆ ಬಗ್ಗೆ ಅಂಬೇಡ್ಕರ್ ಭವನದಲ್ಲಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು:
“ಅವರು ಈ ರೀತಿ ಹೇಳಿದ್ದಾರೆ ಎಂದು ನಾನು ನಂಬುವುದಿಲ್ಲ. ಒಂದು ವೇಳೆ ಅವರು ಈ ಹೇಳಿಕೆ ಕೊಟ್ಟಿದ್ದೇ ಆಗಿದ್ದರೆ ವಿವರಣೆ ಕೇಳಿ ನೋಟಿಸ್ ನೀಡುತ್ತೇವೆ. ನಾವು ಗ್ಯಾರಂಟಿ ವಿಚಾರದಲ್ಲಿ ರಾಜ್ಯದ ಜನರಿಗೆ ಮಾತು ಕೊಟ್ಟಿದ್ದು, ಎಂತಹುದ್ದೇ ಪರಿಸ್ಥಿತಿ ಬಂದರೂ ನಾವು ಅದಕ್ಕೆ ಬದ್ಧವಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು. ಪ್ರಶ್ನೆ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು. ಅನರ್ಹರು ಇದರ ಲಾಭ ಪಡೆಯುತ್ತಿದ್ದರೆ, ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈ ಯೋಜನೆಗಳಿಂದ ಪ್ರತಿ ಕ್ಷೇತ್ರಕ್ಕೆ 250 ಕೋಟಿಯಷ್ಟು ಹಣ ಹೋಗುತ್ತಿದೆ. ಇದು ಆ ಕ್ಷೇತ್ರದ ಜನರ ಅಭಿವೃದ್ಧಿಯಲ್ಲವೇ? ಅಭಿವೃದ್ಧಿ ಕಾರ್ಯಗಳಿಗೂ ನಾವು ಅನುದಾನ ನೀಡುತ್ತಿದ್ದೇವೆ” ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಭೇಟಿ ನೀಡುತ್ತಿರುವುದು ಮಹದಾಯಿ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ಹಾಗೂ ಆ ಭಾಗದ ಸಂಸದರನ್ನು ಭೇಟಿಯಾಗಲು. ಜೊತೆಗೆ ಜಾರ್ಖಂಡ್ನಲ್ಲಿ ಹೇಮಂತ್ ಸೊರೆನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಾಗುವುದು. ಗಾಂಧೀಜಿ ಅವರು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿರುವ ಹಿನ್ನೆಲೆ ಆ ಕಾರ್ಯಕ್ರಮದ ರೂಪುರೇಷೆ ವಿಚಾರವಾಗಿ ಚರ್ಚೆ ಮಾಡಲು ತೆರಳುತ್ತಿದ್ದೇನೆ” ಎಂದು ತಿಳಿಸಿದರು.
Congress MLA H.R. Gaviyappa has stirred controversy by suggesting the cancellation of two state guarantee schemes, citing a lack of grants for his Hospet constituency in Vijayanagar district.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm