ಬ್ರೇಕಿಂಗ್ ನ್ಯೂಸ್
26-11-24 10:46 pm Bangalore Correspondent ಕರ್ನಾಟಕ
ಬೆಂಗಳೂರು, ನ 26: “ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟಿಸ್ ನೀಡಲಾಗುವುದು” ಎಂದು ಡಿ. ಕೆ ಶಿವಕುಮಾರ್ ತಿಳಿಸಿದ್ದಾರೆ.
ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದೇವೆ ಎಂಬ ಶಾಸಕ ಗವಿಯಪ್ಪ ಅವರ ಹೇಳಿಕೆ ಬಗ್ಗೆ ಅಂಬೇಡ್ಕರ್ ಭವನದಲ್ಲಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು:
“ಅವರು ಈ ರೀತಿ ಹೇಳಿದ್ದಾರೆ ಎಂದು ನಾನು ನಂಬುವುದಿಲ್ಲ. ಒಂದು ವೇಳೆ ಅವರು ಈ ಹೇಳಿಕೆ ಕೊಟ್ಟಿದ್ದೇ ಆಗಿದ್ದರೆ ವಿವರಣೆ ಕೇಳಿ ನೋಟಿಸ್ ನೀಡುತ್ತೇವೆ. ನಾವು ಗ್ಯಾರಂಟಿ ವಿಚಾರದಲ್ಲಿ ರಾಜ್ಯದ ಜನರಿಗೆ ಮಾತು ಕೊಟ್ಟಿದ್ದು, ಎಂತಹುದ್ದೇ ಪರಿಸ್ಥಿತಿ ಬಂದರೂ ನಾವು ಅದಕ್ಕೆ ಬದ್ಧವಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು. ಪ್ರಶ್ನೆ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು. ಅನರ್ಹರು ಇದರ ಲಾಭ ಪಡೆಯುತ್ತಿದ್ದರೆ, ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈ ಯೋಜನೆಗಳಿಂದ ಪ್ರತಿ ಕ್ಷೇತ್ರಕ್ಕೆ 250 ಕೋಟಿಯಷ್ಟು ಹಣ ಹೋಗುತ್ತಿದೆ. ಇದು ಆ ಕ್ಷೇತ್ರದ ಜನರ ಅಭಿವೃದ್ಧಿಯಲ್ಲವೇ? ಅಭಿವೃದ್ಧಿ ಕಾರ್ಯಗಳಿಗೂ ನಾವು ಅನುದಾನ ನೀಡುತ್ತಿದ್ದೇವೆ” ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಭೇಟಿ ನೀಡುತ್ತಿರುವುದು ಮಹದಾಯಿ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ಹಾಗೂ ಆ ಭಾಗದ ಸಂಸದರನ್ನು ಭೇಟಿಯಾಗಲು. ಜೊತೆಗೆ ಜಾರ್ಖಂಡ್ನಲ್ಲಿ ಹೇಮಂತ್ ಸೊರೆನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಾಗುವುದು. ಗಾಂಧೀಜಿ ಅವರು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿರುವ ಹಿನ್ನೆಲೆ ಆ ಕಾರ್ಯಕ್ರಮದ ರೂಪುರೇಷೆ ವಿಚಾರವಾಗಿ ಚರ್ಚೆ ಮಾಡಲು ತೆರಳುತ್ತಿದ್ದೇನೆ” ಎಂದು ತಿಳಿಸಿದರು.
Congress MLA H.R. Gaviyappa has stirred controversy by suggesting the cancellation of two state guarantee schemes, citing a lack of grants for his Hospet constituency in Vijayanagar district.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am