ಬ್ರೇಕಿಂಗ್ ನ್ಯೂಸ್
14-12-20 12:25 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14 : ಕೋಲಾರ ಜಿಲ್ಲೆಯ ನರಸಾಪುರ ಸಮೀಪದ ಐಫೋನ್ ಕಾರ್ಖಾನೆಯಲ್ಲಿ ಕಾರ್ಮಿಕರು ನಡೆಸಿದ ದಾಂಧಲೆಯಲ್ಲಿ ಭಾರಿ ಪ್ರಮಾಣದ ನಷ್ಟ ಉಂಟಾಗಿದೆ. ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆಕ್ರೋಶದಲ್ಲಿ ಕಾರ್ಮಿಕರು ಘಟಕದ ಮೇಲೆ ದಾಳಿ ನಡೆಸಿದ್ದರು. ಜತೆಗೆ ಸಾವಿರಾರು ಐಫೋನ್ಗಳನ್ನು ಕಳವು ಮಾಡಿದ್ದಾರೆ ಎನ್ನಲಾಗಿದ್ದು, ಸುಮಾರು 440 ಕೋಟಿ ರೂ. ನಷ್ಟ ಆಗಿದೆ ಎಂದು ವಿಸ್ಟ್ರಾನ್ ಕಂಪೆನಿ ತಿಳಿಸಿದೆ.
ಪೊಲೀಸರು ಮತ್ತು ಕಾರ್ಮಿಕ ಇಲಾಖೆಗೆ ನೀಡಿರುವ ದೂರಿನಲ್ಲಿ ಕಂಪೆನಿ ಈ ಮಾಹಿತಿ ನೀಡಿದೆ. ಈ ನಷ್ಟದಲ್ಲಿ ಹೆಚ್ಚಿನ ಮೊತ್ತದ ಪಾಲು ಐಫೋನ್ಗಳ ಕಳ್ಳತನದಿಂದ ಆಗಿದೆ. ದಾಳಿಯ ವೇಳೆ ಸುಮಾರು 21 ಸಾವಿರ ಐ ಫೋನ್ಗಳನ್ನು ಧ್ವಂಸ ಮಾಡಲಾಗಿದೆ ಎನ್ನಲಾಗಿತ್ತು. ಹಿಂಸಾಚಾರದ ಸಂದರ್ಭದಲ್ಲಿ ಘಟಕದಲ್ಲಿದ್ದ ಸಾವಿರಾರು ಫೋನ್ಗಳನ್ನು ಕಳವು ಮಾಡಲಾಗಿದೆ. ಜತೆಗೆ ಕಾರ್ಖಾನೆಯ ಪ್ರಮುಖ ಕಾರ್ಯ ಚಟುವಟಿಕೆಯ ಕೇಂದ್ರ ಹಾಗೂ ಉಪಕರಣಗಳಿಗೆ ಹಾನಿ ಮಾಡಲಾಗಿದೆ. ಇದರಿಂದ ನಷ್ಟದ ಪ್ರಮಾಣ ಹೆಚ್ಚಾಗಿದೆ ಎಂದು ಕಂಪೆನಿ ದೂರಿನಲ್ಲಿ ತಿಳಿಸಿದೆ.


ಎರಡು ಗಂಟೆ ನಡೆದಿದ್ದ ದಾಳಿ
ಕೋಲಾರದ ನರಸಾಪುರ ಸಮೀಪದಲ್ಲಿರುವ ಐಫೋನ್ ತಯಾರಿಕಾ ಘಟಕದಲ್ಲಿ ಶನಿವಾರ ಸುಮಾರು ಎರಡು ಗಂಟೆಗಳ ಕಾಲ ಹಿಂಸಾಕೃತ್ಯ ನಡೆದಿತ್ತು. ಕಂಪೆನಿ ಸರಿಯಾಗಿ ಸಂಬಳ ಕೊಡದೆ ಸತಾಯಿಸಿದ್ದರ ವಿರುದ್ಧ ರೊಚ್ಚಿಗೆದ್ದಿದ್ದ ಕಾರ್ಮಿಕರು ಕೈಗೆ ಸಿಕ್ಕ ವಸ್ತುಗಳಿಂದ ದಾಳಿ ನಡೆಸಿದ್ದರು. ಕಂಪೆನಿಗೆ ಹಾನಿ ಮಾಡಿದ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.
ವಿಸ್ಟ್ರಾನ್ ಮತ್ತು ಗುತ್ತಿಗೆ ಕಾರ್ಮಿಕರ ನಡುವೆ ಮೂರು ತಿಂಗಳಿನಿಂದಲೂ ವೇತನದ ಕುರಿತಂತೆ ವಿವಾದ ನಡೆಯುತ್ತಿತ್ತು. ಕೋಲಾರದಲ್ಲಿನ ತನ್ನ ಘಟಕಕ್ಕೆ ಆರು ಅಂಗಸಂಸ್ಥೆಗಳಿಂದ 8,900 ಮಂದಿ ಕಾರ್ಮಿಕರನ್ನು ವಿಸ್ಟ್ರಾನ್ ನೇಮಿಸಿಕೊಂಡಿತ್ತು ಅವರು ತಿಳಿಸಿದ್ದಾರೆ.



ಗುತ್ತಿಗೆ ಸಂಸ್ಥೆಗಳ ಲೋಪ
'ಕಂಪೆನಿಯು ಕಾರ್ಮಿಕರನ್ನು ಗುತ್ತಿಗೆ ನೀಡಿದ ಸಂಸ್ಥೆಗಳಿಗೆ ವೇತನವನ್ನು ಸರಿಯಾಗಿ ಪಾವತಿ ಮಾಡಿತ್ತು. ಆದರೆ ಆ ಸಂಸ್ಥೆಗಳು ತನ್ನ ಉದ್ಯೋಗಿಗಳ ವೇತನವನ್ನು ವಿಳಂಬಮಾಡಿತ್ತು ಎಂದು ನಮಗೆ ತಿಳಿದುಬಂದಿದೆ. ಇದನ್ನು ಪರಿಶೀಲಿಸಲಾಗುತ್ತಿದೆ' ಎಂದು ಶೆಟ್ಟರ್ ಹೇಳಿದ್ದಾರೆ. ಬಾಕಿ ಮೊತ್ತವನ್ನು ಕಾರ್ಮಿಕರಿಗೆ ಪಾವತಿಸುವಂತೆ ವಿಸ್ಟ್ರಾನ್ಗೆ ಕಾರ್ಮಿಕ ಇಲಾಖೆ ನೋಟಿಸ್ ನೀಡಿದೆ.
An iPhone manufacturing plant run by giant Wistron Corporation at Narsapura came under attack from its employees over salary dues, by incurring a loss of 440 crores.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm