ಬ್ರೇಕಿಂಗ್ ನ್ಯೂಸ್
28-11-24 05:04 pm Bangalore Correspondent ಕರ್ನಾಟಕ
ಬೆಂಗಳೂರು, ನ.28: ವಶಕ್ಕೆ ಪಡೆದಿದ್ದ ಆರೋಪಿ ಲಾಕಪ್ ಡೆತ್ ಆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ 55,000 ರೂ. ದಂಡ ವಿಧಿಸಲಾಗಿದೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಹೇಂದ್ರ ರಾಥೋಡ್ ಎಂಬಾತನನ್ನು ಬಂಧಿಸಿ 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯೊಳಗೆ ಸಾವನ್ನಪ್ಪಿದ್ದರು. ಸಾವಿನ ಕುರಿತು ಇಲಾಖೆ ತನಿಖೆಗೆ ಆದೇಶಿಸಲಾಗಿತ್ತು. ತನಿಖೆ ಸಂದರ್ಭದಲ್ಲಿ ಠಾಣೆಯಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಮಹೇಂದ್ರ ಅವರನ್ನು ತೀವ್ರ ಥಳಿಸಿದ್ದು ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿತ್ತು.
2019ರ ಜುಲೈ 18ರಂದು ಸಿಐಡಿ ಅಧಿಕಾರಿಗಳು ಆರೋಪಿ ಪೊಲೀಸರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಶಿಕ್ಷೆ ವಿಧಿಸಿದೆ ಎಂದು ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಡ್ ಕಾನ್ಸ್ಟೇಬಲ್ ಎಜಾಜ್ ಖಾನ್, ಕಾನ್ಸ್ಟೇಬಲ್ಗಳಾದ ಕೇಶವ ಮೂರ್ತಿ, ಮೋಹನ್ ರಾಮ್ ಮತ್ತು ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಏಳು ವರ್ಷ ಜೈಲು ಶಿಕ್ಷೆ ಮತ್ತು 30 ಸಾವಿರ ದಂಡ ಮತ್ತು ಐಪಿಸಿ ಕಲಂ 330ರ ಅಡಿಯಲ್ಲಿ ಐದು ವರ್ಷ ಜೈಲು ಮತ್ತು 25 ಸಾವಿರ ರು. ದಂಡ ವಿಧಿಸಲಾಗಿದೆ.
The CID special court in Bengaluru has sentenced four police personnel to 7-years in prison in the lockup death case of an accused detained on suspicion.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am