ಬ್ರೇಕಿಂಗ್ ನ್ಯೂಸ್
14-12-20 12:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಸಾರಿಗೆ ನೌಕರರ ಮುಷ್ಕರವನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೈಜಾಕ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರ ಆಕ್ರೋಶ ಈಗ ಕೋಡಿಹಳ್ಳಿ ವಿರುದ್ಧ ತಿರುಗಿಬಿದ್ದಿದೆ. ತಮ್ಮ ಮೊಡುತನ, ಪ್ರತಿಷ್ಠೆಗೆ ಕಾರ್ಮಿಕರನ್ನು ಬಲಿಯಾಗಿಸಿದ್ದಾರೆ ಎಂದು ಕಾರ್ಮಿಕ ಸಂಘಗಳ ಮುಖಂಡರು ಕೋಡಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಸಂಘಟನೆಗಳ ಪೈಕಿ ಪ್ರಮುಖವಾಗಿರುವ ಎಐಟಿಯುಸಿ ನಾಯಕ ಅನಂತ ಸುಬ್ಬರಾವ್, ಕೋಡಿಹಳ್ಳಿ ವಿರುದ್ಧ ಹರಿಹಾಯ್ದಿದ್ದಾರೆ.
ಕೋಡಿಹಳ್ಳಿಯವರೇ ಡೀಲ್ ಮಾಡುವುದು ಬಿಟ್ಟು ಲೀಡರ್ ಆಗಿ ಕೆಲಸ ಮಾಡಿ. ನೀವು ಹೀಗೆ ವರ್ತಿಸುವುದನ್ನು ನೋಡಿದರೆ ಇದರ ಹಿಂದೆ ಏನೋ ಅಜೆಂಡಾ ಇಟ್ಟುಕೊಂಡಿರುವ ಸಂಶಯ ಕಾಣುತ್ತಿದೆ. ಅವರ ಒಣಪ್ರತಿಷ್ಠೆಗೆ ಸಾರಿಗೆ ನೌಕರರು ಬಲಿಯಾಗಬೇಕಾಗಿದೆ. ಕೋಡಿಹಳ್ಳಿ ಅವರದ್ದೇನು ಮೊನೋಪಾಲಿನಾ ಎಂದು ಸುಬ್ಬರಾವ್ ಮಾಧ್ಯಮ ಒಂದಕ್ಕೆ ಹೇಳಿಕೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರತಿಭಟನೆ ಮಾಡಲು ಹೊರಟ ಕಾರ್ಮಿಕರನ್ನು ದಾರಿ ತಪ್ಪಿಸಿ ಅವರಿಂದ ದಿಢೀರ್ ಮುಷ್ಕರ ಮಾಡಿಸಿದ್ದಾರೆ. ಸಂಘಟನೆ ಕಟ್ಟಿ ಬೆಳೆಸೋದು ಸಾಮಾನ್ಯ ಸಂಗತಿಯಲ್ಲ. ಈ ಕೋಡಿಹಳ್ಳಿ ಎಂದಾದರೂ ಕಾರ್ಮಿಕ ಸಂಘಟನೆ ಕಟ್ಟಿದ್ದಾರೆಯೇ, ಕಾರ್ಮಿಕ ಕಾನೂನುಗಳ ಅರಿವು ಹೊಂದಿದ್ದಾರೆಯೇ.. ಕೋಡಿಹಳ್ಳಿಯವರ ಹಿನ್ನೆಲೆ ನೋಡಿದರೆ ಅವರು ಖಾಸಗಿಯವರ ಪರ ಇದ್ದವರೇ ಹೊರತು ಸಾರ್ವಜನಿಕ ಸಂಸ್ಥೆಗಳ ಪರ ಇದ್ದವರಲ್ಲ. ಇವರು ಖಾಸಗಿ ಲಾಬಿಯ ಪರ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಇದರ ಹಿಂದೇನೂ ಏನೋ ಡೀಲ್ ಮಾಡುತ್ತಿರುವ ಬಗ್ಗೆ ಸಂಶಯ ಬರುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆಯೇ ಮಾತುಕತೆ ನಡೆಸಿದ ಬಳಿಕ ನಮ್ಮ ಸಂಘಟನೆಯ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದೇವೆ. ಕೋಡಿಹಳ್ಳಿ ಮಾತು ಕಟ್ಟಿಕೊಂಡು ಇಂದು ಕೂಡ ಮುಷ್ಕರ ಮುಂದವರಿಸಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅನಂತ ಸುಬ್ಬರಾವ್ ಕಾರ್ಮಿಕರನ್ನು ಎಚ್ಚರಿಸಿದ್ದಾರೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm