ಬ್ರೇಕಿಂಗ್ ನ್ಯೂಸ್
14-12-20 12:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಸಾರಿಗೆ ನೌಕರರ ಮುಷ್ಕರವನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೈಜಾಕ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರ ಆಕ್ರೋಶ ಈಗ ಕೋಡಿಹಳ್ಳಿ ವಿರುದ್ಧ ತಿರುಗಿಬಿದ್ದಿದೆ. ತಮ್ಮ ಮೊಡುತನ, ಪ್ರತಿಷ್ಠೆಗೆ ಕಾರ್ಮಿಕರನ್ನು ಬಲಿಯಾಗಿಸಿದ್ದಾರೆ ಎಂದು ಕಾರ್ಮಿಕ ಸಂಘಗಳ ಮುಖಂಡರು ಕೋಡಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಸಂಘಟನೆಗಳ ಪೈಕಿ ಪ್ರಮುಖವಾಗಿರುವ ಎಐಟಿಯುಸಿ ನಾಯಕ ಅನಂತ ಸುಬ್ಬರಾವ್, ಕೋಡಿಹಳ್ಳಿ ವಿರುದ್ಧ ಹರಿಹಾಯ್ದಿದ್ದಾರೆ.
ಕೋಡಿಹಳ್ಳಿಯವರೇ ಡೀಲ್ ಮಾಡುವುದು ಬಿಟ್ಟು ಲೀಡರ್ ಆಗಿ ಕೆಲಸ ಮಾಡಿ. ನೀವು ಹೀಗೆ ವರ್ತಿಸುವುದನ್ನು ನೋಡಿದರೆ ಇದರ ಹಿಂದೆ ಏನೋ ಅಜೆಂಡಾ ಇಟ್ಟುಕೊಂಡಿರುವ ಸಂಶಯ ಕಾಣುತ್ತಿದೆ. ಅವರ ಒಣಪ್ರತಿಷ್ಠೆಗೆ ಸಾರಿಗೆ ನೌಕರರು ಬಲಿಯಾಗಬೇಕಾಗಿದೆ. ಕೋಡಿಹಳ್ಳಿ ಅವರದ್ದೇನು ಮೊನೋಪಾಲಿನಾ ಎಂದು ಸುಬ್ಬರಾವ್ ಮಾಧ್ಯಮ ಒಂದಕ್ಕೆ ಹೇಳಿಕೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರತಿಭಟನೆ ಮಾಡಲು ಹೊರಟ ಕಾರ್ಮಿಕರನ್ನು ದಾರಿ ತಪ್ಪಿಸಿ ಅವರಿಂದ ದಿಢೀರ್ ಮುಷ್ಕರ ಮಾಡಿಸಿದ್ದಾರೆ. ಸಂಘಟನೆ ಕಟ್ಟಿ ಬೆಳೆಸೋದು ಸಾಮಾನ್ಯ ಸಂಗತಿಯಲ್ಲ. ಈ ಕೋಡಿಹಳ್ಳಿ ಎಂದಾದರೂ ಕಾರ್ಮಿಕ ಸಂಘಟನೆ ಕಟ್ಟಿದ್ದಾರೆಯೇ, ಕಾರ್ಮಿಕ ಕಾನೂನುಗಳ ಅರಿವು ಹೊಂದಿದ್ದಾರೆಯೇ.. ಕೋಡಿಹಳ್ಳಿಯವರ ಹಿನ್ನೆಲೆ ನೋಡಿದರೆ ಅವರು ಖಾಸಗಿಯವರ ಪರ ಇದ್ದವರೇ ಹೊರತು ಸಾರ್ವಜನಿಕ ಸಂಸ್ಥೆಗಳ ಪರ ಇದ್ದವರಲ್ಲ. ಇವರು ಖಾಸಗಿ ಲಾಬಿಯ ಪರ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಇದರ ಹಿಂದೇನೂ ಏನೋ ಡೀಲ್ ಮಾಡುತ್ತಿರುವ ಬಗ್ಗೆ ಸಂಶಯ ಬರುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆಯೇ ಮಾತುಕತೆ ನಡೆಸಿದ ಬಳಿಕ ನಮ್ಮ ಸಂಘಟನೆಯ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದೇವೆ. ಕೋಡಿಹಳ್ಳಿ ಮಾತು ಕಟ್ಟಿಕೊಂಡು ಇಂದು ಕೂಡ ಮುಷ್ಕರ ಮುಂದವರಿಸಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅನಂತ ಸುಬ್ಬರಾವ್ ಕಾರ್ಮಿಕರನ್ನು ಎಚ್ಚರಿಸಿದ್ದಾರೆ.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm