ಬ್ರೇಕಿಂಗ್ ನ್ಯೂಸ್
14-12-20 12:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಸಾರಿಗೆ ನೌಕರರ ಮುಷ್ಕರವನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೈಜಾಕ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರ ಆಕ್ರೋಶ ಈಗ ಕೋಡಿಹಳ್ಳಿ ವಿರುದ್ಧ ತಿರುಗಿಬಿದ್ದಿದೆ. ತಮ್ಮ ಮೊಡುತನ, ಪ್ರತಿಷ್ಠೆಗೆ ಕಾರ್ಮಿಕರನ್ನು ಬಲಿಯಾಗಿಸಿದ್ದಾರೆ ಎಂದು ಕಾರ್ಮಿಕ ಸಂಘಗಳ ಮುಖಂಡರು ಕೋಡಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಸಂಘಟನೆಗಳ ಪೈಕಿ ಪ್ರಮುಖವಾಗಿರುವ ಎಐಟಿಯುಸಿ ನಾಯಕ ಅನಂತ ಸುಬ್ಬರಾವ್, ಕೋಡಿಹಳ್ಳಿ ವಿರುದ್ಧ ಹರಿಹಾಯ್ದಿದ್ದಾರೆ.
ಕೋಡಿಹಳ್ಳಿಯವರೇ ಡೀಲ್ ಮಾಡುವುದು ಬಿಟ್ಟು ಲೀಡರ್ ಆಗಿ ಕೆಲಸ ಮಾಡಿ. ನೀವು ಹೀಗೆ ವರ್ತಿಸುವುದನ್ನು ನೋಡಿದರೆ ಇದರ ಹಿಂದೆ ಏನೋ ಅಜೆಂಡಾ ಇಟ್ಟುಕೊಂಡಿರುವ ಸಂಶಯ ಕಾಣುತ್ತಿದೆ. ಅವರ ಒಣಪ್ರತಿಷ್ಠೆಗೆ ಸಾರಿಗೆ ನೌಕರರು ಬಲಿಯಾಗಬೇಕಾಗಿದೆ. ಕೋಡಿಹಳ್ಳಿ ಅವರದ್ದೇನು ಮೊನೋಪಾಲಿನಾ ಎಂದು ಸುಬ್ಬರಾವ್ ಮಾಧ್ಯಮ ಒಂದಕ್ಕೆ ಹೇಳಿಕೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ಮಾಡಲು ಹೊರಟ ಕಾರ್ಮಿಕರನ್ನು ದಾರಿ ತಪ್ಪಿಸಿ ಅವರಿಂದ ದಿಢೀರ್ ಮುಷ್ಕರ ಮಾಡಿಸಿದ್ದಾರೆ. ಸಂಘಟನೆ ಕಟ್ಟಿ ಬೆಳೆಸೋದು ಸಾಮಾನ್ಯ ಸಂಗತಿಯಲ್ಲ. ಈ ಕೋಡಿಹಳ್ಳಿ ಎಂದಾದರೂ ಕಾರ್ಮಿಕ ಸಂಘಟನೆ ಕಟ್ಟಿದ್ದಾರೆಯೇ, ಕಾರ್ಮಿಕ ಕಾನೂನುಗಳ ಅರಿವು ಹೊಂದಿದ್ದಾರೆಯೇ.. ಕೋಡಿಹಳ್ಳಿಯವರ ಹಿನ್ನೆಲೆ ನೋಡಿದರೆ ಅವರು ಖಾಸಗಿಯವರ ಪರ ಇದ್ದವರೇ ಹೊರತು ಸಾರ್ವಜನಿಕ ಸಂಸ್ಥೆಗಳ ಪರ ಇದ್ದವರಲ್ಲ. ಇವರು ಖಾಸಗಿ ಲಾಬಿಯ ಪರ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಇದರ ಹಿಂದೇನೂ ಏನೋ ಡೀಲ್ ಮಾಡುತ್ತಿರುವ ಬಗ್ಗೆ ಸಂಶಯ ಬರುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆಯೇ ಮಾತುಕತೆ ನಡೆಸಿದ ಬಳಿಕ ನಮ್ಮ ಸಂಘಟನೆಯ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದೇವೆ. ಕೋಡಿಹಳ್ಳಿ ಮಾತು ಕಟ್ಟಿಕೊಂಡು ಇಂದು ಕೂಡ ಮುಷ್ಕರ ಮುಂದವರಿಸಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅನಂತ ಸುಬ್ಬರಾವ್ ಕಾರ್ಮಿಕರನ್ನು ಎಚ್ಚರಿಸಿದ್ದಾರೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm