ಬ್ರೇಕಿಂಗ್ ನ್ಯೂಸ್
14-12-20 12:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಸಾರಿಗೆ ನೌಕರರ ಮುಷ್ಕರವನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೈಜಾಕ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರ ಆಕ್ರೋಶ ಈಗ ಕೋಡಿಹಳ್ಳಿ ವಿರುದ್ಧ ತಿರುಗಿಬಿದ್ದಿದೆ. ತಮ್ಮ ಮೊಡುತನ, ಪ್ರತಿಷ್ಠೆಗೆ ಕಾರ್ಮಿಕರನ್ನು ಬಲಿಯಾಗಿಸಿದ್ದಾರೆ ಎಂದು ಕಾರ್ಮಿಕ ಸಂಘಗಳ ಮುಖಂಡರು ಕೋಡಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಸಂಘಟನೆಗಳ ಪೈಕಿ ಪ್ರಮುಖವಾಗಿರುವ ಎಐಟಿಯುಸಿ ನಾಯಕ ಅನಂತ ಸುಬ್ಬರಾವ್, ಕೋಡಿಹಳ್ಳಿ ವಿರುದ್ಧ ಹರಿಹಾಯ್ದಿದ್ದಾರೆ.
ಕೋಡಿಹಳ್ಳಿಯವರೇ ಡೀಲ್ ಮಾಡುವುದು ಬಿಟ್ಟು ಲೀಡರ್ ಆಗಿ ಕೆಲಸ ಮಾಡಿ. ನೀವು ಹೀಗೆ ವರ್ತಿಸುವುದನ್ನು ನೋಡಿದರೆ ಇದರ ಹಿಂದೆ ಏನೋ ಅಜೆಂಡಾ ಇಟ್ಟುಕೊಂಡಿರುವ ಸಂಶಯ ಕಾಣುತ್ತಿದೆ. ಅವರ ಒಣಪ್ರತಿಷ್ಠೆಗೆ ಸಾರಿಗೆ ನೌಕರರು ಬಲಿಯಾಗಬೇಕಾಗಿದೆ. ಕೋಡಿಹಳ್ಳಿ ಅವರದ್ದೇನು ಮೊನೋಪಾಲಿನಾ ಎಂದು ಸುಬ್ಬರಾವ್ ಮಾಧ್ಯಮ ಒಂದಕ್ಕೆ ಹೇಳಿಕೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರತಿಭಟನೆ ಮಾಡಲು ಹೊರಟ ಕಾರ್ಮಿಕರನ್ನು ದಾರಿ ತಪ್ಪಿಸಿ ಅವರಿಂದ ದಿಢೀರ್ ಮುಷ್ಕರ ಮಾಡಿಸಿದ್ದಾರೆ. ಸಂಘಟನೆ ಕಟ್ಟಿ ಬೆಳೆಸೋದು ಸಾಮಾನ್ಯ ಸಂಗತಿಯಲ್ಲ. ಈ ಕೋಡಿಹಳ್ಳಿ ಎಂದಾದರೂ ಕಾರ್ಮಿಕ ಸಂಘಟನೆ ಕಟ್ಟಿದ್ದಾರೆಯೇ, ಕಾರ್ಮಿಕ ಕಾನೂನುಗಳ ಅರಿವು ಹೊಂದಿದ್ದಾರೆಯೇ.. ಕೋಡಿಹಳ್ಳಿಯವರ ಹಿನ್ನೆಲೆ ನೋಡಿದರೆ ಅವರು ಖಾಸಗಿಯವರ ಪರ ಇದ್ದವರೇ ಹೊರತು ಸಾರ್ವಜನಿಕ ಸಂಸ್ಥೆಗಳ ಪರ ಇದ್ದವರಲ್ಲ. ಇವರು ಖಾಸಗಿ ಲಾಬಿಯ ಪರ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಇದರ ಹಿಂದೇನೂ ಏನೋ ಡೀಲ್ ಮಾಡುತ್ತಿರುವ ಬಗ್ಗೆ ಸಂಶಯ ಬರುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆಯೇ ಮಾತುಕತೆ ನಡೆಸಿದ ಬಳಿಕ ನಮ್ಮ ಸಂಘಟನೆಯ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದೇವೆ. ಕೋಡಿಹಳ್ಳಿ ಮಾತು ಕಟ್ಟಿಕೊಂಡು ಇಂದು ಕೂಡ ಮುಷ್ಕರ ಮುಂದವರಿಸಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅನಂತ ಸುಬ್ಬರಾವ್ ಕಾರ್ಮಿಕರನ್ನು ಎಚ್ಚರಿಸಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm