ಬ್ರೇಕಿಂಗ್ ನ್ಯೂಸ್
14-12-20 12:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಸಾರಿಗೆ ನೌಕರರ ಮುಷ್ಕರವನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೈಜಾಕ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರ ಆಕ್ರೋಶ ಈಗ ಕೋಡಿಹಳ್ಳಿ ವಿರುದ್ಧ ತಿರುಗಿಬಿದ್ದಿದೆ. ತಮ್ಮ ಮೊಡುತನ, ಪ್ರತಿಷ್ಠೆಗೆ ಕಾರ್ಮಿಕರನ್ನು ಬಲಿಯಾಗಿಸಿದ್ದಾರೆ ಎಂದು ಕಾರ್ಮಿಕ ಸಂಘಗಳ ಮುಖಂಡರು ಕೋಡಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಸಂಘಟನೆಗಳ ಪೈಕಿ ಪ್ರಮುಖವಾಗಿರುವ ಎಐಟಿಯುಸಿ ನಾಯಕ ಅನಂತ ಸುಬ್ಬರಾವ್, ಕೋಡಿಹಳ್ಳಿ ವಿರುದ್ಧ ಹರಿಹಾಯ್ದಿದ್ದಾರೆ.
ಕೋಡಿಹಳ್ಳಿಯವರೇ ಡೀಲ್ ಮಾಡುವುದು ಬಿಟ್ಟು ಲೀಡರ್ ಆಗಿ ಕೆಲಸ ಮಾಡಿ. ನೀವು ಹೀಗೆ ವರ್ತಿಸುವುದನ್ನು ನೋಡಿದರೆ ಇದರ ಹಿಂದೆ ಏನೋ ಅಜೆಂಡಾ ಇಟ್ಟುಕೊಂಡಿರುವ ಸಂಶಯ ಕಾಣುತ್ತಿದೆ. ಅವರ ಒಣಪ್ರತಿಷ್ಠೆಗೆ ಸಾರಿಗೆ ನೌಕರರು ಬಲಿಯಾಗಬೇಕಾಗಿದೆ. ಕೋಡಿಹಳ್ಳಿ ಅವರದ್ದೇನು ಮೊನೋಪಾಲಿನಾ ಎಂದು ಸುಬ್ಬರಾವ್ ಮಾಧ್ಯಮ ಒಂದಕ್ಕೆ ಹೇಳಿಕೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರತಿಭಟನೆ ಮಾಡಲು ಹೊರಟ ಕಾರ್ಮಿಕರನ್ನು ದಾರಿ ತಪ್ಪಿಸಿ ಅವರಿಂದ ದಿಢೀರ್ ಮುಷ್ಕರ ಮಾಡಿಸಿದ್ದಾರೆ. ಸಂಘಟನೆ ಕಟ್ಟಿ ಬೆಳೆಸೋದು ಸಾಮಾನ್ಯ ಸಂಗತಿಯಲ್ಲ. ಈ ಕೋಡಿಹಳ್ಳಿ ಎಂದಾದರೂ ಕಾರ್ಮಿಕ ಸಂಘಟನೆ ಕಟ್ಟಿದ್ದಾರೆಯೇ, ಕಾರ್ಮಿಕ ಕಾನೂನುಗಳ ಅರಿವು ಹೊಂದಿದ್ದಾರೆಯೇ.. ಕೋಡಿಹಳ್ಳಿಯವರ ಹಿನ್ನೆಲೆ ನೋಡಿದರೆ ಅವರು ಖಾಸಗಿಯವರ ಪರ ಇದ್ದವರೇ ಹೊರತು ಸಾರ್ವಜನಿಕ ಸಂಸ್ಥೆಗಳ ಪರ ಇದ್ದವರಲ್ಲ. ಇವರು ಖಾಸಗಿ ಲಾಬಿಯ ಪರ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಇದರ ಹಿಂದೇನೂ ಏನೋ ಡೀಲ್ ಮಾಡುತ್ತಿರುವ ಬಗ್ಗೆ ಸಂಶಯ ಬರುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆಯೇ ಮಾತುಕತೆ ನಡೆಸಿದ ಬಳಿಕ ನಮ್ಮ ಸಂಘಟನೆಯ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದೇವೆ. ಕೋಡಿಹಳ್ಳಿ ಮಾತು ಕಟ್ಟಿಕೊಂಡು ಇಂದು ಕೂಡ ಮುಷ್ಕರ ಮುಂದವರಿಸಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅನಂತ ಸುಬ್ಬರಾವ್ ಕಾರ್ಮಿಕರನ್ನು ಎಚ್ಚರಿಸಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm