ಬ್ರೇಕಿಂಗ್ ನ್ಯೂಸ್
29-11-24 04:12 pm HK News Desk ಕರ್ನಾಟಕ
ಬೆಳಗಾವಿ, ನ.29: ಸಾರ್ವಜನಿಕರಿಗೆ ಸಮಸ್ಯೆ, ಅಹಿತಕರ ಘಟನೆಗಳು, ಅಪರಾಧಗಳು, ಸುಲಿಗೆ, ದರೋಡೆ ಕಳ್ಳತನ ಇಂತಹವು ನಡೆಯದಂತೆ ಸಮಾಜವನ್ನು ಕಾಪಾಡುವುದು ಪೊಲೀಸರ ಕರ್ತವ್ಯ. ಸರ್ಕಾರದಿಂದ ನೇಮಕ ಆಗುವ ಪೊಲೀಸರಿಗೆ ಇಡೀ ಸಮಾಜದ ರಕ್ಷಣೆ ಹೊಣೆ ಇರುತ್ತೆ. ನಿರ್ದಿಷ್ಟ ಸ್ಥಳದಲ್ಲಿ ಏನು ನಡೆಯಬಾರದು ಎಂದು ಇವರನ್ನು ನೇಮಕ ಮಾಡಲಾಗುತ್ತದೆ. ಆದರೆ ರಕ್ಷಣೆ ಮಾಡಬೇಕಾದವರೆ ಪೊಲೀಸ್ ಠಾಣೆಯಲ್ಲಿ ಹೋಮ- ಹವನ ಮೊರೆ ಹೋದರೆ ಹೇಗೆ?.
ಬೆಳಗಾವಿಯ ಪೊಲೀಸ್ ಠಾಣೆ ವ್ಯಾಪ್ತಿಯೊಂದರಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಪೊಲೀಸರು ಹೋಮ-ಹವನದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಪ್ರಕರಣಗಳು ಠಾಣೆಗೆ ಬರುತ್ತಿದ್ದಂತೆ ಪೊಲೀಸರು ಈ ಪೂಜೆ ಮಾಡಿಸಿದ್ದಾರೆ. ಠಾಣೆಯ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ಈ ಹೋಮ ಹವನ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಬೆಳಗಾವಿ ನಗರದ ಶಿವ ಬಸವನಗರದಲ್ಲಿ ಇರುವ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿ ಸಾಲು ಸಾಲು ಅಪರಾಧ ಪ್ರಕರಣಗಳು ನಡೆದಿವೆ. ಕಳೆದ ಎರಡು ವಾರದಿಂದ ಈ ಠಾಣೆಯಲ್ಲಿ ಕ್ರೈಂ ಪ್ರಕರಣಗಳು ದಾಖಲು ಆಗಿವೆ. ಮಹಿಳೆ ಮೇಲೆ ವಿವಸ್ತ್ರಗೊಳಿಸಿ ಹಲ್ಲೆ, ಫೋಟೋಗ್ರಾಫರ್ ಕಿಡ್ನಾಪ್, ಪ್ರೀತಿ ವಿಚಾರಕ್ಕೆ ಸಂಬಂಧಪಟ್ಟಂತೆ ಶೂಟೌಟ್ ಹೀಗೆ ಪ್ರಕರಣಗಳು ಒಂದರ ಹಿಂದೆ ಒಂದು ನಡೆಯುತ್ತಿವೆ. ಹೀಗಾಗಿಯೇ ಪೊಲೀಸರು ಠಾಣೆಯಲ್ಲಿ ಹೋಮ, ಹವನ ಮಾಡಿಸಿದ್ದಾರೆ. ಮಾಳಮಾರುತಿ ಸಿಪಿಐ ಜೆಎಂ ಕಾಲಿಮಿರ್ಜಿ ನೇತೃತ್ವದಲ್ಲಿ ಪೂಜೆ ನಡೆದಿದೆ ಎನ್ನಲಾಗಿದೆ.
ಪೂಜೆಯಲ್ಲಿ ತೆಂಗಿನ ಕಾಯಿ, ಕುಂಕುಮ, ಭಂಡಾರ, ಬಾಳೆ ಹಣ್ಣುಗಳು, ಕರ್ಪೂರ, ಸ್ವೀಟ್ಸ್, ಅರಿಶಿಣ ಕೊಂಬು, ಅಡಿಕೆ, ಎಲೆಗಳು ಸೇರಿ ಇತರೆ ವಸ್ತುಗಳು ಇರುವುದು ಕಂಡು ಬಂದಿದೆ.
Belagavi Malamaruthi police staffs organise special Pooja for increase in crime. Thier jurisdiction has been raise in crimes after which staffs including the inspector has organised special Pooja.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm