ಬ್ರೇಕಿಂಗ್ ನ್ಯೂಸ್
29-11-24 04:12 pm HK News Desk ಕರ್ನಾಟಕ
ಬೆಳಗಾವಿ, ನ.29: ಸಾರ್ವಜನಿಕರಿಗೆ ಸಮಸ್ಯೆ, ಅಹಿತಕರ ಘಟನೆಗಳು, ಅಪರಾಧಗಳು, ಸುಲಿಗೆ, ದರೋಡೆ ಕಳ್ಳತನ ಇಂತಹವು ನಡೆಯದಂತೆ ಸಮಾಜವನ್ನು ಕಾಪಾಡುವುದು ಪೊಲೀಸರ ಕರ್ತವ್ಯ. ಸರ್ಕಾರದಿಂದ ನೇಮಕ ಆಗುವ ಪೊಲೀಸರಿಗೆ ಇಡೀ ಸಮಾಜದ ರಕ್ಷಣೆ ಹೊಣೆ ಇರುತ್ತೆ. ನಿರ್ದಿಷ್ಟ ಸ್ಥಳದಲ್ಲಿ ಏನು ನಡೆಯಬಾರದು ಎಂದು ಇವರನ್ನು ನೇಮಕ ಮಾಡಲಾಗುತ್ತದೆ. ಆದರೆ ರಕ್ಷಣೆ ಮಾಡಬೇಕಾದವರೆ ಪೊಲೀಸ್ ಠಾಣೆಯಲ್ಲಿ ಹೋಮ- ಹವನ ಮೊರೆ ಹೋದರೆ ಹೇಗೆ?.
ಬೆಳಗಾವಿಯ ಪೊಲೀಸ್ ಠಾಣೆ ವ್ಯಾಪ್ತಿಯೊಂದರಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಪೊಲೀಸರು ಹೋಮ-ಹವನದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಪ್ರಕರಣಗಳು ಠಾಣೆಗೆ ಬರುತ್ತಿದ್ದಂತೆ ಪೊಲೀಸರು ಈ ಪೂಜೆ ಮಾಡಿಸಿದ್ದಾರೆ. ಠಾಣೆಯ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ಈ ಹೋಮ ಹವನ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ.


ಬೆಳಗಾವಿ ನಗರದ ಶಿವ ಬಸವನಗರದಲ್ಲಿ ಇರುವ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿ ಸಾಲು ಸಾಲು ಅಪರಾಧ ಪ್ರಕರಣಗಳು ನಡೆದಿವೆ. ಕಳೆದ ಎರಡು ವಾರದಿಂದ ಈ ಠಾಣೆಯಲ್ಲಿ ಕ್ರೈಂ ಪ್ರಕರಣಗಳು ದಾಖಲು ಆಗಿವೆ. ಮಹಿಳೆ ಮೇಲೆ ವಿವಸ್ತ್ರಗೊಳಿಸಿ ಹಲ್ಲೆ, ಫೋಟೋಗ್ರಾಫರ್ ಕಿಡ್ನಾಪ್, ಪ್ರೀತಿ ವಿಚಾರಕ್ಕೆ ಸಂಬಂಧಪಟ್ಟಂತೆ ಶೂಟೌಟ್ ಹೀಗೆ ಪ್ರಕರಣಗಳು ಒಂದರ ಹಿಂದೆ ಒಂದು ನಡೆಯುತ್ತಿವೆ. ಹೀಗಾಗಿಯೇ ಪೊಲೀಸರು ಠಾಣೆಯಲ್ಲಿ ಹೋಮ, ಹವನ ಮಾಡಿಸಿದ್ದಾರೆ. ಮಾಳಮಾರುತಿ ಸಿಪಿಐ ಜೆಎಂ ಕಾಲಿಮಿರ್ಜಿ ನೇತೃತ್ವದಲ್ಲಿ ಪೂಜೆ ನಡೆದಿದೆ ಎನ್ನಲಾಗಿದೆ.
ಪೂಜೆಯಲ್ಲಿ ತೆಂಗಿನ ಕಾಯಿ, ಕುಂಕುಮ, ಭಂಡಾರ, ಬಾಳೆ ಹಣ್ಣುಗಳು, ಕರ್ಪೂರ, ಸ್ವೀಟ್ಸ್, ಅರಿಶಿಣ ಕೊಂಬು, ಅಡಿಕೆ, ಎಲೆಗಳು ಸೇರಿ ಇತರೆ ವಸ್ತುಗಳು ಇರುವುದು ಕಂಡು ಬಂದಿದೆ.
Belagavi Malamaruthi police staffs organise special Pooja for increase in crime. Thier jurisdiction has been raise in crimes after which staffs including the inspector has organised special Pooja.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm