ಬ್ರೇಕಿಂಗ್ ನ್ಯೂಸ್
29-11-24 04:12 pm HK News Desk ಕರ್ನಾಟಕ
ಬೆಳಗಾವಿ, ನ.29: ಸಾರ್ವಜನಿಕರಿಗೆ ಸಮಸ್ಯೆ, ಅಹಿತಕರ ಘಟನೆಗಳು, ಅಪರಾಧಗಳು, ಸುಲಿಗೆ, ದರೋಡೆ ಕಳ್ಳತನ ಇಂತಹವು ನಡೆಯದಂತೆ ಸಮಾಜವನ್ನು ಕಾಪಾಡುವುದು ಪೊಲೀಸರ ಕರ್ತವ್ಯ. ಸರ್ಕಾರದಿಂದ ನೇಮಕ ಆಗುವ ಪೊಲೀಸರಿಗೆ ಇಡೀ ಸಮಾಜದ ರಕ್ಷಣೆ ಹೊಣೆ ಇರುತ್ತೆ. ನಿರ್ದಿಷ್ಟ ಸ್ಥಳದಲ್ಲಿ ಏನು ನಡೆಯಬಾರದು ಎಂದು ಇವರನ್ನು ನೇಮಕ ಮಾಡಲಾಗುತ್ತದೆ. ಆದರೆ ರಕ್ಷಣೆ ಮಾಡಬೇಕಾದವರೆ ಪೊಲೀಸ್ ಠಾಣೆಯಲ್ಲಿ ಹೋಮ- ಹವನ ಮೊರೆ ಹೋದರೆ ಹೇಗೆ?.
ಬೆಳಗಾವಿಯ ಪೊಲೀಸ್ ಠಾಣೆ ವ್ಯಾಪ್ತಿಯೊಂದರಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಪೊಲೀಸರು ಹೋಮ-ಹವನದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಪ್ರಕರಣಗಳು ಠಾಣೆಗೆ ಬರುತ್ತಿದ್ದಂತೆ ಪೊಲೀಸರು ಈ ಪೂಜೆ ಮಾಡಿಸಿದ್ದಾರೆ. ಠಾಣೆಯ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ಈ ಹೋಮ ಹವನ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ.


ಬೆಳಗಾವಿ ನಗರದ ಶಿವ ಬಸವನಗರದಲ್ಲಿ ಇರುವ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿ ಸಾಲು ಸಾಲು ಅಪರಾಧ ಪ್ರಕರಣಗಳು ನಡೆದಿವೆ. ಕಳೆದ ಎರಡು ವಾರದಿಂದ ಈ ಠಾಣೆಯಲ್ಲಿ ಕ್ರೈಂ ಪ್ರಕರಣಗಳು ದಾಖಲು ಆಗಿವೆ. ಮಹಿಳೆ ಮೇಲೆ ವಿವಸ್ತ್ರಗೊಳಿಸಿ ಹಲ್ಲೆ, ಫೋಟೋಗ್ರಾಫರ್ ಕಿಡ್ನಾಪ್, ಪ್ರೀತಿ ವಿಚಾರಕ್ಕೆ ಸಂಬಂಧಪಟ್ಟಂತೆ ಶೂಟೌಟ್ ಹೀಗೆ ಪ್ರಕರಣಗಳು ಒಂದರ ಹಿಂದೆ ಒಂದು ನಡೆಯುತ್ತಿವೆ. ಹೀಗಾಗಿಯೇ ಪೊಲೀಸರು ಠಾಣೆಯಲ್ಲಿ ಹೋಮ, ಹವನ ಮಾಡಿಸಿದ್ದಾರೆ. ಮಾಳಮಾರುತಿ ಸಿಪಿಐ ಜೆಎಂ ಕಾಲಿಮಿರ್ಜಿ ನೇತೃತ್ವದಲ್ಲಿ ಪೂಜೆ ನಡೆದಿದೆ ಎನ್ನಲಾಗಿದೆ.
ಪೂಜೆಯಲ್ಲಿ ತೆಂಗಿನ ಕಾಯಿ, ಕುಂಕುಮ, ಭಂಡಾರ, ಬಾಳೆ ಹಣ್ಣುಗಳು, ಕರ್ಪೂರ, ಸ್ವೀಟ್ಸ್, ಅರಿಶಿಣ ಕೊಂಬು, ಅಡಿಕೆ, ಎಲೆಗಳು ಸೇರಿ ಇತರೆ ವಸ್ತುಗಳು ಇರುವುದು ಕಂಡು ಬಂದಿದೆ.
Belagavi Malamaruthi police staffs organise special Pooja for increase in crime. Thier jurisdiction has been raise in crimes after which staffs including the inspector has organised special Pooja.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm