ಬ್ರೇಕಿಂಗ್ ನ್ಯೂಸ್
29-11-24 04:12 pm HK News Desk ಕರ್ನಾಟಕ
ಬೆಳಗಾವಿ, ನ.29: ಸಾರ್ವಜನಿಕರಿಗೆ ಸಮಸ್ಯೆ, ಅಹಿತಕರ ಘಟನೆಗಳು, ಅಪರಾಧಗಳು, ಸುಲಿಗೆ, ದರೋಡೆ ಕಳ್ಳತನ ಇಂತಹವು ನಡೆಯದಂತೆ ಸಮಾಜವನ್ನು ಕಾಪಾಡುವುದು ಪೊಲೀಸರ ಕರ್ತವ್ಯ. ಸರ್ಕಾರದಿಂದ ನೇಮಕ ಆಗುವ ಪೊಲೀಸರಿಗೆ ಇಡೀ ಸಮಾಜದ ರಕ್ಷಣೆ ಹೊಣೆ ಇರುತ್ತೆ. ನಿರ್ದಿಷ್ಟ ಸ್ಥಳದಲ್ಲಿ ಏನು ನಡೆಯಬಾರದು ಎಂದು ಇವರನ್ನು ನೇಮಕ ಮಾಡಲಾಗುತ್ತದೆ. ಆದರೆ ರಕ್ಷಣೆ ಮಾಡಬೇಕಾದವರೆ ಪೊಲೀಸ್ ಠಾಣೆಯಲ್ಲಿ ಹೋಮ- ಹವನ ಮೊರೆ ಹೋದರೆ ಹೇಗೆ?.
ಬೆಳಗಾವಿಯ ಪೊಲೀಸ್ ಠಾಣೆ ವ್ಯಾಪ್ತಿಯೊಂದರಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಪೊಲೀಸರು ಹೋಮ-ಹವನದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಪ್ರಕರಣಗಳು ಠಾಣೆಗೆ ಬರುತ್ತಿದ್ದಂತೆ ಪೊಲೀಸರು ಈ ಪೂಜೆ ಮಾಡಿಸಿದ್ದಾರೆ. ಠಾಣೆಯ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ಈ ಹೋಮ ಹವನ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ.


ಬೆಳಗಾವಿ ನಗರದ ಶಿವ ಬಸವನಗರದಲ್ಲಿ ಇರುವ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿ ಸಾಲು ಸಾಲು ಅಪರಾಧ ಪ್ರಕರಣಗಳು ನಡೆದಿವೆ. ಕಳೆದ ಎರಡು ವಾರದಿಂದ ಈ ಠಾಣೆಯಲ್ಲಿ ಕ್ರೈಂ ಪ್ರಕರಣಗಳು ದಾಖಲು ಆಗಿವೆ. ಮಹಿಳೆ ಮೇಲೆ ವಿವಸ್ತ್ರಗೊಳಿಸಿ ಹಲ್ಲೆ, ಫೋಟೋಗ್ರಾಫರ್ ಕಿಡ್ನಾಪ್, ಪ್ರೀತಿ ವಿಚಾರಕ್ಕೆ ಸಂಬಂಧಪಟ್ಟಂತೆ ಶೂಟೌಟ್ ಹೀಗೆ ಪ್ರಕರಣಗಳು ಒಂದರ ಹಿಂದೆ ಒಂದು ನಡೆಯುತ್ತಿವೆ. ಹೀಗಾಗಿಯೇ ಪೊಲೀಸರು ಠಾಣೆಯಲ್ಲಿ ಹೋಮ, ಹವನ ಮಾಡಿಸಿದ್ದಾರೆ. ಮಾಳಮಾರುತಿ ಸಿಪಿಐ ಜೆಎಂ ಕಾಲಿಮಿರ್ಜಿ ನೇತೃತ್ವದಲ್ಲಿ ಪೂಜೆ ನಡೆದಿದೆ ಎನ್ನಲಾಗಿದೆ.
ಪೂಜೆಯಲ್ಲಿ ತೆಂಗಿನ ಕಾಯಿ, ಕುಂಕುಮ, ಭಂಡಾರ, ಬಾಳೆ ಹಣ್ಣುಗಳು, ಕರ್ಪೂರ, ಸ್ವೀಟ್ಸ್, ಅರಿಶಿಣ ಕೊಂಬು, ಅಡಿಕೆ, ಎಲೆಗಳು ಸೇರಿ ಇತರೆ ವಸ್ತುಗಳು ಇರುವುದು ಕಂಡು ಬಂದಿದೆ.
Belagavi Malamaruthi police staffs organise special Pooja for increase in crime. Thier jurisdiction has been raise in crimes after which staffs including the inspector has organised special Pooja.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am