ಬ್ರೇಕಿಂಗ್ ನ್ಯೂಸ್
29-11-24 04:12 pm HK News Desk ಕರ್ನಾಟಕ
ಬೆಳಗಾವಿ, ನ.29: ಸಾರ್ವಜನಿಕರಿಗೆ ಸಮಸ್ಯೆ, ಅಹಿತಕರ ಘಟನೆಗಳು, ಅಪರಾಧಗಳು, ಸುಲಿಗೆ, ದರೋಡೆ ಕಳ್ಳತನ ಇಂತಹವು ನಡೆಯದಂತೆ ಸಮಾಜವನ್ನು ಕಾಪಾಡುವುದು ಪೊಲೀಸರ ಕರ್ತವ್ಯ. ಸರ್ಕಾರದಿಂದ ನೇಮಕ ಆಗುವ ಪೊಲೀಸರಿಗೆ ಇಡೀ ಸಮಾಜದ ರಕ್ಷಣೆ ಹೊಣೆ ಇರುತ್ತೆ. ನಿರ್ದಿಷ್ಟ ಸ್ಥಳದಲ್ಲಿ ಏನು ನಡೆಯಬಾರದು ಎಂದು ಇವರನ್ನು ನೇಮಕ ಮಾಡಲಾಗುತ್ತದೆ. ಆದರೆ ರಕ್ಷಣೆ ಮಾಡಬೇಕಾದವರೆ ಪೊಲೀಸ್ ಠಾಣೆಯಲ್ಲಿ ಹೋಮ- ಹವನ ಮೊರೆ ಹೋದರೆ ಹೇಗೆ?.
ಬೆಳಗಾವಿಯ ಪೊಲೀಸ್ ಠಾಣೆ ವ್ಯಾಪ್ತಿಯೊಂದರಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಪೊಲೀಸರು ಹೋಮ-ಹವನದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಪ್ರಕರಣಗಳು ಠಾಣೆಗೆ ಬರುತ್ತಿದ್ದಂತೆ ಪೊಲೀಸರು ಈ ಪೂಜೆ ಮಾಡಿಸಿದ್ದಾರೆ. ಠಾಣೆಯ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ಈ ಹೋಮ ಹವನ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ.


ಬೆಳಗಾವಿ ನಗರದ ಶಿವ ಬಸವನಗರದಲ್ಲಿ ಇರುವ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿ ಸಾಲು ಸಾಲು ಅಪರಾಧ ಪ್ರಕರಣಗಳು ನಡೆದಿವೆ. ಕಳೆದ ಎರಡು ವಾರದಿಂದ ಈ ಠಾಣೆಯಲ್ಲಿ ಕ್ರೈಂ ಪ್ರಕರಣಗಳು ದಾಖಲು ಆಗಿವೆ. ಮಹಿಳೆ ಮೇಲೆ ವಿವಸ್ತ್ರಗೊಳಿಸಿ ಹಲ್ಲೆ, ಫೋಟೋಗ್ರಾಫರ್ ಕಿಡ್ನಾಪ್, ಪ್ರೀತಿ ವಿಚಾರಕ್ಕೆ ಸಂಬಂಧಪಟ್ಟಂತೆ ಶೂಟೌಟ್ ಹೀಗೆ ಪ್ರಕರಣಗಳು ಒಂದರ ಹಿಂದೆ ಒಂದು ನಡೆಯುತ್ತಿವೆ. ಹೀಗಾಗಿಯೇ ಪೊಲೀಸರು ಠಾಣೆಯಲ್ಲಿ ಹೋಮ, ಹವನ ಮಾಡಿಸಿದ್ದಾರೆ. ಮಾಳಮಾರುತಿ ಸಿಪಿಐ ಜೆಎಂ ಕಾಲಿಮಿರ್ಜಿ ನೇತೃತ್ವದಲ್ಲಿ ಪೂಜೆ ನಡೆದಿದೆ ಎನ್ನಲಾಗಿದೆ.
ಪೂಜೆಯಲ್ಲಿ ತೆಂಗಿನ ಕಾಯಿ, ಕುಂಕುಮ, ಭಂಡಾರ, ಬಾಳೆ ಹಣ್ಣುಗಳು, ಕರ್ಪೂರ, ಸ್ವೀಟ್ಸ್, ಅರಿಶಿಣ ಕೊಂಬು, ಅಡಿಕೆ, ಎಲೆಗಳು ಸೇರಿ ಇತರೆ ವಸ್ತುಗಳು ಇರುವುದು ಕಂಡು ಬಂದಿದೆ.
Belagavi Malamaruthi police staffs organise special Pooja for increase in crime. Thier jurisdiction has been raise in crimes after which staffs including the inspector has organised special Pooja.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm