ಬ್ರೇಕಿಂಗ್ ನ್ಯೂಸ್
29-11-24 04:12 pm HK News Desk ಕರ್ನಾಟಕ
ಬೆಳಗಾವಿ, ನ.29: ಸಾರ್ವಜನಿಕರಿಗೆ ಸಮಸ್ಯೆ, ಅಹಿತಕರ ಘಟನೆಗಳು, ಅಪರಾಧಗಳು, ಸುಲಿಗೆ, ದರೋಡೆ ಕಳ್ಳತನ ಇಂತಹವು ನಡೆಯದಂತೆ ಸಮಾಜವನ್ನು ಕಾಪಾಡುವುದು ಪೊಲೀಸರ ಕರ್ತವ್ಯ. ಸರ್ಕಾರದಿಂದ ನೇಮಕ ಆಗುವ ಪೊಲೀಸರಿಗೆ ಇಡೀ ಸಮಾಜದ ರಕ್ಷಣೆ ಹೊಣೆ ಇರುತ್ತೆ. ನಿರ್ದಿಷ್ಟ ಸ್ಥಳದಲ್ಲಿ ಏನು ನಡೆಯಬಾರದು ಎಂದು ಇವರನ್ನು ನೇಮಕ ಮಾಡಲಾಗುತ್ತದೆ. ಆದರೆ ರಕ್ಷಣೆ ಮಾಡಬೇಕಾದವರೆ ಪೊಲೀಸ್ ಠಾಣೆಯಲ್ಲಿ ಹೋಮ- ಹವನ ಮೊರೆ ಹೋದರೆ ಹೇಗೆ?.
ಬೆಳಗಾವಿಯ ಪೊಲೀಸ್ ಠಾಣೆ ವ್ಯಾಪ್ತಿಯೊಂದರಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಪೊಲೀಸರು ಹೋಮ-ಹವನದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಪ್ರಕರಣಗಳು ಠಾಣೆಗೆ ಬರುತ್ತಿದ್ದಂತೆ ಪೊಲೀಸರು ಈ ಪೂಜೆ ಮಾಡಿಸಿದ್ದಾರೆ. ಠಾಣೆಯ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ಈ ಹೋಮ ಹವನ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಬೆಳಗಾವಿ ನಗರದ ಶಿವ ಬಸವನಗರದಲ್ಲಿ ಇರುವ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿ ಸಾಲು ಸಾಲು ಅಪರಾಧ ಪ್ರಕರಣಗಳು ನಡೆದಿವೆ. ಕಳೆದ ಎರಡು ವಾರದಿಂದ ಈ ಠಾಣೆಯಲ್ಲಿ ಕ್ರೈಂ ಪ್ರಕರಣಗಳು ದಾಖಲು ಆಗಿವೆ. ಮಹಿಳೆ ಮೇಲೆ ವಿವಸ್ತ್ರಗೊಳಿಸಿ ಹಲ್ಲೆ, ಫೋಟೋಗ್ರಾಫರ್ ಕಿಡ್ನಾಪ್, ಪ್ರೀತಿ ವಿಚಾರಕ್ಕೆ ಸಂಬಂಧಪಟ್ಟಂತೆ ಶೂಟೌಟ್ ಹೀಗೆ ಪ್ರಕರಣಗಳು ಒಂದರ ಹಿಂದೆ ಒಂದು ನಡೆಯುತ್ತಿವೆ. ಹೀಗಾಗಿಯೇ ಪೊಲೀಸರು ಠಾಣೆಯಲ್ಲಿ ಹೋಮ, ಹವನ ಮಾಡಿಸಿದ್ದಾರೆ. ಮಾಳಮಾರುತಿ ಸಿಪಿಐ ಜೆಎಂ ಕಾಲಿಮಿರ್ಜಿ ನೇತೃತ್ವದಲ್ಲಿ ಪೂಜೆ ನಡೆದಿದೆ ಎನ್ನಲಾಗಿದೆ.
ಪೂಜೆಯಲ್ಲಿ ತೆಂಗಿನ ಕಾಯಿ, ಕುಂಕುಮ, ಭಂಡಾರ, ಬಾಳೆ ಹಣ್ಣುಗಳು, ಕರ್ಪೂರ, ಸ್ವೀಟ್ಸ್, ಅರಿಶಿಣ ಕೊಂಬು, ಅಡಿಕೆ, ಎಲೆಗಳು ಸೇರಿ ಇತರೆ ವಸ್ತುಗಳು ಇರುವುದು ಕಂಡು ಬಂದಿದೆ.
Belagavi Malamaruthi police staffs organise special Pooja for increase in crime. Thier jurisdiction has been raise in crimes after which staffs including the inspector has organised special Pooja.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm