ಬ್ರೇಕಿಂಗ್ ನ್ಯೂಸ್
29-11-24 05:01 pm Bangalore Correspondent ಕರ್ನಾಟಕ
ಬೆಂಗಳೂರು, ನ.29: 'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದು ವಿವಾದಿತ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬಾತ ಚಂದ್ರಶೇಖರ ಸ್ವಾಮೀಜಿ, ನಮ್ಮ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕಾನೂನಾತ್ಮಕ ಕ್ರಮ ಕೈಗೊಳ್ಳಲು ಆಗ್ರಹಿಸಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ವಿರುದ್ಧ ಭಾರತೀಯ ನ್ಯಾಯಸಂಹಿತೆ 299ರ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅವರು, 'ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು. ಬೇರೆಯವರ ಭೂಮಿಯನ್ನು ಕಸಿದುಕೊಳ್ಳುವುದು ಧರ್ಮವಲ್ಲ. ಮೊದಲು ವಕ್ಫ್ ಬೋರ್ಡ್ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದರು.
ಚಂದ್ರಶೇಖರ ಸ್ವಾಮೀಜಿಗಳ ಹೇಳಿಕೆ ಕುರಿತಂತೆ ಎಚ್.ಸಿ ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದರು. ತನ್ನ ಹೇಳಿಕೆ ವಿವಾದಕ್ಕೆ ಒಳಗಾಗುತ್ತಿದ್ದಂತೆ ಎಚ್ಚೆತ್ತ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದರು.
ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ. ಎಲ್ಲರಂತೆ ಅವರಿಗೂ ಮತದಾನದ ಹಕ್ಕು ಇರುತ್ತದೆ. ತಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದರು.
An FIR has been registered against Chandrasekhar Swamiji of the Vishwa Okkaligara Mahasansthan Math for his controversial statement suggesting that Muslims should be denied voting rights and that the Waqf Board should be abolished.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm