ಬ್ರೇಕಿಂಗ್ ನ್ಯೂಸ್
29-11-24 05:01 pm Bangalore Correspondent ಕರ್ನಾಟಕ
ಬೆಂಗಳೂರು, ನ.29: 'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದು ವಿವಾದಿತ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬಾತ ಚಂದ್ರಶೇಖರ ಸ್ವಾಮೀಜಿ, ನಮ್ಮ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕಾನೂನಾತ್ಮಕ ಕ್ರಮ ಕೈಗೊಳ್ಳಲು ಆಗ್ರಹಿಸಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ವಿರುದ್ಧ ಭಾರತೀಯ ನ್ಯಾಯಸಂಹಿತೆ 299ರ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅವರು, 'ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು. ಬೇರೆಯವರ ಭೂಮಿಯನ್ನು ಕಸಿದುಕೊಳ್ಳುವುದು ಧರ್ಮವಲ್ಲ. ಮೊದಲು ವಕ್ಫ್ ಬೋರ್ಡ್ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದರು.
ಚಂದ್ರಶೇಖರ ಸ್ವಾಮೀಜಿಗಳ ಹೇಳಿಕೆ ಕುರಿತಂತೆ ಎಚ್.ಸಿ ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದರು. ತನ್ನ ಹೇಳಿಕೆ ವಿವಾದಕ್ಕೆ ಒಳಗಾಗುತ್ತಿದ್ದಂತೆ ಎಚ್ಚೆತ್ತ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದರು.
ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ. ಎಲ್ಲರಂತೆ ಅವರಿಗೂ ಮತದಾನದ ಹಕ್ಕು ಇರುತ್ತದೆ. ತಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದರು.
An FIR has been registered against Chandrasekhar Swamiji of the Vishwa Okkaligara Mahasansthan Math for his controversial statement suggesting that Muslims should be denied voting rights and that the Waqf Board should be abolished.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm