ಬ್ರೇಕಿಂಗ್ ನ್ಯೂಸ್
29-11-24 05:01 pm Bangalore Correspondent ಕರ್ನಾಟಕ
ಬೆಂಗಳೂರು, ನ.29: 'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದು ವಿವಾದಿತ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬಾತ ಚಂದ್ರಶೇಖರ ಸ್ವಾಮೀಜಿ, ನಮ್ಮ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕಾನೂನಾತ್ಮಕ ಕ್ರಮ ಕೈಗೊಳ್ಳಲು ಆಗ್ರಹಿಸಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ವಿರುದ್ಧ ಭಾರತೀಯ ನ್ಯಾಯಸಂಹಿತೆ 299ರ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅವರು, 'ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು. ಬೇರೆಯವರ ಭೂಮಿಯನ್ನು ಕಸಿದುಕೊಳ್ಳುವುದು ಧರ್ಮವಲ್ಲ. ಮೊದಲು ವಕ್ಫ್ ಬೋರ್ಡ್ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದರು.
ಚಂದ್ರಶೇಖರ ಸ್ವಾಮೀಜಿಗಳ ಹೇಳಿಕೆ ಕುರಿತಂತೆ ಎಚ್.ಸಿ ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದರು. ತನ್ನ ಹೇಳಿಕೆ ವಿವಾದಕ್ಕೆ ಒಳಗಾಗುತ್ತಿದ್ದಂತೆ ಎಚ್ಚೆತ್ತ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದರು.
ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ. ಎಲ್ಲರಂತೆ ಅವರಿಗೂ ಮತದಾನದ ಹಕ್ಕು ಇರುತ್ತದೆ. ತಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದರು.
An FIR has been registered against Chandrasekhar Swamiji of the Vishwa Okkaligara Mahasansthan Math for his controversial statement suggesting that Muslims should be denied voting rights and that the Waqf Board should be abolished.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am