ಬ್ರೇಕಿಂಗ್ ನ್ಯೂಸ್
30-11-24 11:09 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.30: ಕಾಡಾನೆ ದಾಳಿಗೆ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನ ಸೀತೂರು ಸಮೀಪದ ಕೆರೆಗದ್ದೆ ಗ್ರಾಮದ ಉಮೇಶ್(56) ಎಂದು ಗುರುತಿಸಲಾಗಿದೆ.
ಸೀತೂರು ಗ್ರಾಮದಲ್ಲಿ ಮೂರು ಕಾಡಾನೆಗಳು ಬಂದಿದ್ದು ಗದ್ದೆ- ತೋಟಗಳ ಮೇಲೆ ದಾಂಧಲೆ ಮಾಡುತ್ತಿದ್ದವು. ಆನೆ ಹಾವಳಿಯಿಂದ ರೈತರೇ ಆನೆಗಳನ್ನ ಓಡಿಸಲು ಹೋಗಿದ್ದರಿಂದ ದುರ್ಘಟನೆ ಸಂಭವಿಸಿದೆ ಎಂದು ಸ್ಥಳಿಯರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆನೆಗಳು ಕಂಡ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ, ಅಧಿಕಾರಿಗಳು ತಡವಾಗಿ ಬಂದ ಹಿನ್ನೆಲೆ ಸ್ಥಳೀಯರೇ ಆನೆಗಳನ್ನ ಓಡಿಸಲು ಮುಂದಾಗಿದ್ದಾರೆ. ಘಟನೆಗೆ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ.
ಆನೆ ಬಗ್ಗೆ ಮಾಹಿತಿ ನೀಡಿದರು ತಡವಾಗಿ ಬಂದ ಅರಣ್ಯ ಅಧಿಕಾರಿಗಳೇ ಈ ಸಾವಿಗೆ ನೇರ ಹೊಣೆ, ರೈತನ ಸಾವಿಗೆ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕಾಡಾನೆಗಳನ್ನ ಓಡಿಸಬೇಕು, ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಎನ್.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A person died in an elephant attack at Seethur village in N.R. Pura taluk of Chikkamagaluru on Saturday. Umesh, 56, was working in his agricultural field when the elephant attacked him.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm