ಬ್ರೇಕಿಂಗ್ ನ್ಯೂಸ್
01-12-24 10:56 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಡಿ 01: ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ನಡುವೆ ದೇವಾಲಯದ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡಿದೆ. ಕಾಡಾನೆಯನ್ನು ಕಾಡಿನ ಗಡಿ ಹತ್ತಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಯಶಸ್ವಿಯಾಗಿದ್ದಾರೆ.
ದೇವಾಲಯದ ಮಠದ ಬಳಿ ಕಾಡಾನೆ ಕಂಡುಬಂದಿದ್ದು, ಜನರು ಓಡಿಸಲು ಹರಸಾಹಸಪಟ್ಟರು. ಜಾತ್ರೆಯ ಬೆಳಕು, ಬ್ಯಾಂಡ್ ಸದ್ದಿಗೆ ಬೆದರಿದ ಆನೆ ಓಡಿದೆ. ಮತ್ತೆ ಕಂಡುಬಂದರೆ ದೇಗುಲದ ಆನೆ ಎಂದು ತಿಳಿದು ಅದಕ್ಕೆ ನಮಸ್ಕರಿಸಲು ಭಕ್ತರು ಮುಂದಾಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಪುತ್ತೂರು ಎ.ಸಿ.ಜುಬಿನ್ ಮೊಹಪಾತ್ರ ಭಕ್ತರು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.
ಆನೆ ಓಡಾಡಿರುವ ದೃಶ್ಯಗಳನ್ನು ಕೆಲವರು ಮೊಬೈಲ್ಗಳಲ್ಲಿ ಸೆರೆಹಿಡಿದಿದ್ದು, ಸಿಸಿಟಿವಿಯಲ್ಲೂ ಚಲನವಲನ ದಾಖಲಾಗಿದೆ.
ಡಿ.7ರಂದು ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.2ರಂದು ಅಶ್ವವಾಹನೋತ್ಸವ, ಡಿ.3ರಂದು ಮಯೂರ ವಾಹನೋತ್ಸವ, ಡಿ.4ರಂದು ಶೇಷ ವಾಹನೋತ್ಸವ, ಡಿ.5ರಂದು ಚೌತಿ ಹೂವಿನ ತೇರಿನ ಉತ್ಸವ, ಡಿ.6ರಂದು ಮಾರ್ಗಶಿರ ಶುದ್ಧ ಪಂಚಮಿ ತೈಲಾಭ್ಯಂಜನ ದಿನ. ಅಂದೇ ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.7ರಂದು ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.8ರಂದು ಅವಭ್ರತೋತ್ಸವ ಮತ್ತು ನೌಕವಿಹಾರ, ಡಿ.12ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.
Wild Elephant found moving near kukke temple in Mangalore, forest officlas issue warning to devotees.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am