ಬ್ರೇಕಿಂಗ್ ನ್ಯೂಸ್
01-12-24 10:56 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಡಿ 01: ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ನಡುವೆ ದೇವಾಲಯದ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡಿದೆ. ಕಾಡಾನೆಯನ್ನು ಕಾಡಿನ ಗಡಿ ಹತ್ತಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಯಶಸ್ವಿಯಾಗಿದ್ದಾರೆ.
ದೇವಾಲಯದ ಮಠದ ಬಳಿ ಕಾಡಾನೆ ಕಂಡುಬಂದಿದ್ದು, ಜನರು ಓಡಿಸಲು ಹರಸಾಹಸಪಟ್ಟರು. ಜಾತ್ರೆಯ ಬೆಳಕು, ಬ್ಯಾಂಡ್ ಸದ್ದಿಗೆ ಬೆದರಿದ ಆನೆ ಓಡಿದೆ. ಮತ್ತೆ ಕಂಡುಬಂದರೆ ದೇಗುಲದ ಆನೆ ಎಂದು ತಿಳಿದು ಅದಕ್ಕೆ ನಮಸ್ಕರಿಸಲು ಭಕ್ತರು ಮುಂದಾಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಪುತ್ತೂರು ಎ.ಸಿ.ಜುಬಿನ್ ಮೊಹಪಾತ್ರ ಭಕ್ತರು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.
ಆನೆ ಓಡಾಡಿರುವ ದೃಶ್ಯಗಳನ್ನು ಕೆಲವರು ಮೊಬೈಲ್ಗಳಲ್ಲಿ ಸೆರೆಹಿಡಿದಿದ್ದು, ಸಿಸಿಟಿವಿಯಲ್ಲೂ ಚಲನವಲನ ದಾಖಲಾಗಿದೆ.
ಡಿ.7ರಂದು ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.2ರಂದು ಅಶ್ವವಾಹನೋತ್ಸವ, ಡಿ.3ರಂದು ಮಯೂರ ವಾಹನೋತ್ಸವ, ಡಿ.4ರಂದು ಶೇಷ ವಾಹನೋತ್ಸವ, ಡಿ.5ರಂದು ಚೌತಿ ಹೂವಿನ ತೇರಿನ ಉತ್ಸವ, ಡಿ.6ರಂದು ಮಾರ್ಗಶಿರ ಶುದ್ಧ ಪಂಚಮಿ ತೈಲಾಭ್ಯಂಜನ ದಿನ. ಅಂದೇ ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.7ರಂದು ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.8ರಂದು ಅವಭ್ರತೋತ್ಸವ ಮತ್ತು ನೌಕವಿಹಾರ, ಡಿ.12ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.
Wild Elephant found moving near kukke temple in Mangalore, forest officlas issue warning to devotees.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 05:41 pm
HK News Staffer
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm