ಬ್ರೇಕಿಂಗ್ ನ್ಯೂಸ್
01-12-24 11:08 pm HK News Desk ಕರ್ನಾಟಕ
ಹಾಸನ, ಡಿ.1: ಪೊಲೀಸ್ ಜೀಪು ಭೀಕರ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಹಾರ ಮೂಲದ ಹರ್ಷಬರ್ಧನ್(26) ದುರಂತ ಸಾವಿಗೀಡಾಗಿದ್ದಾರೆ. ಚಿಕಿತ್ಸೆ ಫಲಿಸದೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ದುರ್ಮರಣಕ್ಕೆ ಒಳಗಾಗಿದ್ದಾರೆ.
ಹಾಸನ ವಿಭಾಗಕ್ಕೆ ಪ್ರೊಬೇಶನರಿ ಡಿವೈಎಸ್ಪಿ ಆಗಿ ನಿಯೋಜನೆಗೊಂಡಿದ್ದ ಹರ್ಷಬರ್ಧನ್ ಅವರು ಮೈಸೂರಿನ ಐಜಿಪಿ ಕಚೇರಿಯಲ್ಲಿ ರಿಪೋರ್ಟ್ ಮಾಡಿ ಎಸ್ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರಕ್ಕೆ ಆಗಮಿಸುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆ ಗ್ರಾಮದಲ್ಲಿ ಜೀಪಿನ ಟೈರ್ ಸಿಡಿದು ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. ಸಂಜೆ ವೇಳೆಗೆ ಘಟನೆ ನಡೆದಿದ್ದು ಇಬ್ಬರಿಗೂ ತೀವ್ರ ಗಾಯವಾಗಿತ್ತು. ಹರ್ಷಬರ್ಧನ್ ಅವರು ತರಬೇತಿ ಮುಗಿಸಿ ಇಲಾಖಾ ತರಬೇತಿಗೆ ವರದಿ ಮಾಡಿಕೊಳ್ಳಲೆಂದು ಹಾಸನಕ್ಕೆ ಬರ್ತಿದ್ದರು. ಐಪಿಎಸ್ ವೃತ್ತಿ ಪ್ರಾರಂಭದ ದಿನವೇ ಸಾವನ್ನಪ್ಪಿದ್ದು ವಿಪರ್ಯಾಸ.







ಹರ್ಷಬರ್ಧನ್ ತಂದೆ ಮಧ್ಯಪ್ರದೇಶದಲ್ಲಿ ಎಡಿಸಿ ಆಗಿದ್ದು 2022 ರ ಯುಪಿಎಸ್ ಸಿ ಪರೀಕ್ಷೆಯಲ್ಲಿ 153 ನೇ ರಾಂಕ್ ನಲ್ಲಿ ಪಾಸ್ ಆಗಿ ಐಪಿಎಸ್ ಕೇಡರ್ ಪಡೆದಿದ್ದರು. ಕಲಿಯುವುದರಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು ಮೊದಲ ಪ್ರಯತ್ನದಲ್ಲೇ ಯುಪಿಎಸ್ ಸಿ ಪಾಸ್ ಮಾಡಿದ್ದರು. ಅಪಘಾತದಲ್ಲಿ ತಲೆಗೆ ಏಟು ಬಿದ್ದಿದ್ದು ಸತತ ನಾಲ್ಕು ಗಂಟೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅಧಿಕಾರಿ ಸಾವಿನ ಬಗ್ಗೆ ಹಾಸನದ ಜನಪ್ರಿಯ ಆಸ್ಪತ್ರೆ ಮುಖ್ಯಸ್ಥ ಡಾ. ಬಸೀರ್ ಸ್ಪಷ್ಟನೆ ನೀಡಿದ್ದಾರೆ.
ಅಪಘಾತದಲ್ಲಿ ಐಪಿಎಸ್ ಹರ್ಷ ಹಾಗೂ ಜೀಪು ಚಾಲಕ ಮಂಜೇಗೌಡ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಹರ್ಷ ಅವರಿಗೆ ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ಮಿದುಳಿನಲ್ಲಿ ತೀವ್ರ ಸ್ವರೂಪದ ರಕ್ತಸ್ರಾವವಾಗಿತ್ತು. ಹಾಸನದ ಬೇರೆ ಬೇರೆ ಆಸ್ಪತ್ರೆಯ ವೈದ್ಯರು ಬಂದು ಚಿಕಿತ್ಸೆ ಉಸ್ತುವಾರಿ ವಹಿಸಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಹರ್ಷ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
Probationary IPS officer in Hassan Harshabardhan (2) killed in road accident after police Jeep topples. He was posted at DYSP Hassan. Harshabardhan was a native of Bihar.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm