ಬ್ರೇಕಿಂಗ್ ನ್ಯೂಸ್
05-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.5: ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಸರಿಯಾಗಿ ವಿಚಾರಣೆ ನಡೆಸದೆ ಹಣ ಪಡೆದು ಬಿಡುಗಡೆ ಮಾಡಿರುವ ಆರೋಪದಲ್ಲಿ ರಾಮಮೂರ್ತಿ ನಗರ ಠಾಣೆಯ ಇನ್ಸ್ಪೆಕ್ಟರ್ ಮುತ್ತುರಾಜ್ ಸೇರಿದಂತೆ 6 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲು ಹೋಗಿದ್ದಾಗ ಆತ ಗಾಂಜಾ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಗಾಂಜಾ ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಕಷ್ಟಪಟ್ಟು ವಶಕ್ಕೆ ತೆಗೆದುಕೊಂಡು ಠಾಣೆಗೆ ಎಳೆತಂದಿದ್ದರು.


ಆದರೆ ಠಾಣೆಯಲ್ಲಿ ಆರೋಪಿಯನ್ನು ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಸದೆ ಆತನಿಂದಲೇ ಹಣ ಪಡೆದು ದೂರನ್ನೂ ದಾಖಲಿಸದೇ ಬಿಡುಗಡೆ ಮಾಡಲಾಗಿತ್ತು. ಠಾಣೆಯ ಇನ್ಸ್ ಪೆಕ್ಟರ್ ಮುತ್ತುರಾಜ್ ಮತ್ತು ಕೆಲವು ಸಿಬಂದಿ ಕೃತ್ಯದಲ್ಲಿ ಶಾಮೀಲಾಗಿದ್ದರು. ಈ ಕುರಿತು ಠಾಣೆಯ ಸಿಬಂದಿಯೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಪತ್ರ ಬರೆದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್, ಈ ಬಗ್ಗೆ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಕಮಿಷನರ್ ಸತೀಶ್ ಕುಮಾರ್ ಅವರಿಗೆ ತನಿಖೆಗೆ ಸೂಚಿಸಿದ್ದರು.
ಎಸಿಪಿ ಸತೀಶ್ ಕುಮಾರ್ ಪ್ರಕರಣ ಬಗ್ಗೆ ಎಲ್ಲ ಸಿಬಂದಿಯನ್ನೂ ವಿಚಾರಣೆ ನಡೆಸಿದಾಗ ಆರೋಪದಲ್ಲಿ ಸತ್ಯಾಂಶ ಕಂಡುಬಂದಿದೆ ಎಂದು ವರದಿ ನೀಡಿದ್ದರು. ವರದಿ ಆಧರಿಸಿ ಠಾಣೆಯ ಇನ್ಸ್ಪೆಕ್ಟರ್ ಮುತ್ತುರಾಜ್, ಪಿಎಸ್ಐ ಉಮೇಶ್, ಎಎಸ್ಐಗಳಾದ ಮಹೇಶ್ ಹಾಗೂ ಫೈರೋಜ್ ಖಾನ್, ಹೆಡ್ ಕಾನ್ಸ್ಟೇಬಲ್ ಮಂಜುನಾಥ್, ಕಾನ್ಸ್ಟೇಬಲ್ ಬಸವರಾಜ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.
Bangalore Ramamurthy Nagar police station inspector Muthuraj and five others suspended over corruption. The staff of the police station had recently sent an unsigned letter to the police commissioner listing out numerous allegations about Muthuraj.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm