ಬ್ರೇಕಿಂಗ್ ನ್ಯೂಸ್
05-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.5: ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಸರಿಯಾಗಿ ವಿಚಾರಣೆ ನಡೆಸದೆ ಹಣ ಪಡೆದು ಬಿಡುಗಡೆ ಮಾಡಿರುವ ಆರೋಪದಲ್ಲಿ ರಾಮಮೂರ್ತಿ ನಗರ ಠಾಣೆಯ ಇನ್ಸ್ಪೆಕ್ಟರ್ ಮುತ್ತುರಾಜ್ ಸೇರಿದಂತೆ 6 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲು ಹೋಗಿದ್ದಾಗ ಆತ ಗಾಂಜಾ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಗಾಂಜಾ ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಕಷ್ಟಪಟ್ಟು ವಶಕ್ಕೆ ತೆಗೆದುಕೊಂಡು ಠಾಣೆಗೆ ಎಳೆತಂದಿದ್ದರು.


ಆದರೆ ಠಾಣೆಯಲ್ಲಿ ಆರೋಪಿಯನ್ನು ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಸದೆ ಆತನಿಂದಲೇ ಹಣ ಪಡೆದು ದೂರನ್ನೂ ದಾಖಲಿಸದೇ ಬಿಡುಗಡೆ ಮಾಡಲಾಗಿತ್ತು. ಠಾಣೆಯ ಇನ್ಸ್ ಪೆಕ್ಟರ್ ಮುತ್ತುರಾಜ್ ಮತ್ತು ಕೆಲವು ಸಿಬಂದಿ ಕೃತ್ಯದಲ್ಲಿ ಶಾಮೀಲಾಗಿದ್ದರು. ಈ ಕುರಿತು ಠಾಣೆಯ ಸಿಬಂದಿಯೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಪತ್ರ ಬರೆದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್, ಈ ಬಗ್ಗೆ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಕಮಿಷನರ್ ಸತೀಶ್ ಕುಮಾರ್ ಅವರಿಗೆ ತನಿಖೆಗೆ ಸೂಚಿಸಿದ್ದರು.
ಎಸಿಪಿ ಸತೀಶ್ ಕುಮಾರ್ ಪ್ರಕರಣ ಬಗ್ಗೆ ಎಲ್ಲ ಸಿಬಂದಿಯನ್ನೂ ವಿಚಾರಣೆ ನಡೆಸಿದಾಗ ಆರೋಪದಲ್ಲಿ ಸತ್ಯಾಂಶ ಕಂಡುಬಂದಿದೆ ಎಂದು ವರದಿ ನೀಡಿದ್ದರು. ವರದಿ ಆಧರಿಸಿ ಠಾಣೆಯ ಇನ್ಸ್ಪೆಕ್ಟರ್ ಮುತ್ತುರಾಜ್, ಪಿಎಸ್ಐ ಉಮೇಶ್, ಎಎಸ್ಐಗಳಾದ ಮಹೇಶ್ ಹಾಗೂ ಫೈರೋಜ್ ಖಾನ್, ಹೆಡ್ ಕಾನ್ಸ್ಟೇಬಲ್ ಮಂಜುನಾಥ್, ಕಾನ್ಸ್ಟೇಬಲ್ ಬಸವರಾಜ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.
Bangalore Ramamurthy Nagar police station inspector Muthuraj and five others suspended over corruption. The staff of the police station had recently sent an unsigned letter to the police commissioner listing out numerous allegations about Muthuraj.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm