Ramamurthy Nagar police inspector Muthuraj, Corrupt: ಕೊಲೆ ಆರೋಪಿಯನ್ನು ಠಾಣೆಯಲ್ಲೇ ಹಣ ಪಡೆದು ಬಿಡುಗಡೆ ; ಕಮಿಷನರ್ ಗೆ ದೂರಿತ್ತಿದ್ದ ಸಿಬಂದಿ, ರಾಮಮೂರ್ತಿ ನಗರ ಠಾಣೆಯ ಭ್ರಷ್ಟ ಇನ್ಸ್ ಪೆಕ್ಟರ್, ಇಬ್ಬರು ಪಿಎಸ್ಐ ಸೇರಿ ಆರು ಮಂದಿ ಅಮಾನತು 

05-12-24 08:32 pm       Bangalore Correspondent   ಕರ್ನಾಟಕ

ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಸರಿಯಾಗಿ ವಿಚಾರಣೆ ನಡೆಸದೆ ಹಣ ಪಡೆದು ಬಿಡುಗಡೆ ಮಾಡಿರುವ ಆರೋಪದಲ್ಲಿ ರಾಮಮೂರ್ತಿ ನಗರ ಠಾಣೆಯ ಇನ್‌ಸ್ಪೆಕ್ಟರ್‌ ಮುತ್ತುರಾಜ್ ಸೇರಿದಂತೆ 6 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು, ಡಿ.5: ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಸರಿಯಾಗಿ ವಿಚಾರಣೆ ನಡೆಸದೆ ಹಣ ಪಡೆದು ಬಿಡುಗಡೆ ಮಾಡಿರುವ ಆರೋಪದಲ್ಲಿ ರಾಮಮೂರ್ತಿ ನಗರ ಠಾಣೆಯ ಇನ್‌ಸ್ಪೆಕ್ಟರ್‌ ಮುತ್ತುರಾಜ್ ಸೇರಿದಂತೆ 6 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲು ಹೋಗಿದ್ದಾಗ ಆತ ಗಾಂಜಾ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಗಾಂಜಾ ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಕಷ್ಟಪಟ್ಟು ವಶಕ್ಕೆ ತೆಗೆದುಕೊಂಡು ಠಾಣೆಗೆ ಎಳೆತಂದಿದ್ದರು.

Newly appointed Bengaluru City Police Commissioner B Dayananda takes charge  of his office

ಆದರೆ ಠಾಣೆಯಲ್ಲಿ ಆರೋಪಿಯನ್ನು ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಸದೆ ಆತನಿಂದಲೇ ಹಣ ಪಡೆದು ದೂರನ್ನೂ ದಾಖಲಿಸದೇ ಬಿಡುಗಡೆ ಮಾಡಲಾಗಿತ್ತು. ಠಾಣೆಯ ಇನ್ಸ್ ಪೆಕ್ಟರ್ ಮುತ್ತುರಾಜ್ ಮತ್ತು ಕೆಲವು ಸಿಬಂದಿ ಕೃತ್ಯದಲ್ಲಿ ಶಾಮೀಲಾಗಿದ್ದರು. ಈ ಕುರಿತು ಠಾಣೆಯ ಸಿಬಂದಿಯೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್‌ ಅವರಿಗೆ ಪತ್ರ ಬರೆದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್, ಈ ಬಗ್ಗೆ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಕಮಿಷನರ್ ಸತೀಶ್ ಕುಮಾರ್ ಅವರಿಗೆ ತನಿಖೆಗೆ ಸೂಚಿಸಿದ್ದರು.

ಎಸಿಪಿ ಸತೀಶ್ ಕುಮಾರ್ ಪ್ರಕರಣ ಬಗ್ಗೆ ಎಲ್ಲ ಸಿಬಂದಿಯನ್ನೂ ವಿಚಾರಣೆ ನಡೆಸಿದಾಗ ಆರೋಪದಲ್ಲಿ ಸತ್ಯಾಂಶ ಕಂಡುಬಂದಿದೆ ಎಂದು ವರದಿ ನೀಡಿದ್ದರು. ವರದಿ ಆಧರಿಸಿ ಠಾಣೆಯ ಇನ್‌ಸ್ಪೆಕ್ಟರ್‌ ಮುತ್ತುರಾಜ್, ಪಿಎಸ್ಐ ಉಮೇಶ್, ಎಎಸ್ಐಗಳಾದ ಮಹೇಶ್ ಹಾಗೂ ಫೈರೋಜ್ ಖಾನ್, ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್, ಕಾನ್‌ಸ್ಟೇಬಲ್ ಬಸವರಾಜ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನರ್ ಬಿ‌.ದಯಾನಂದ್ ಆದೇಶ ಹೊರಡಿಸಿದ್ದಾರೆ.

Bangalore Ramamurthy Nagar police station inspector Muthuraj and five others suspended over corruption. The staff of the police station had recently sent an unsigned letter to the police commissioner listing out numerous allegations about Muthuraj.