ಬ್ರೇಕಿಂಗ್ ನ್ಯೂಸ್
05-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.5: ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಸರಿಯಾಗಿ ವಿಚಾರಣೆ ನಡೆಸದೆ ಹಣ ಪಡೆದು ಬಿಡುಗಡೆ ಮಾಡಿರುವ ಆರೋಪದಲ್ಲಿ ರಾಮಮೂರ್ತಿ ನಗರ ಠಾಣೆಯ ಇನ್ಸ್ಪೆಕ್ಟರ್ ಮುತ್ತುರಾಜ್ ಸೇರಿದಂತೆ 6 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲು ಹೋಗಿದ್ದಾಗ ಆತ ಗಾಂಜಾ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಗಾಂಜಾ ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಕಷ್ಟಪಟ್ಟು ವಶಕ್ಕೆ ತೆಗೆದುಕೊಂಡು ಠಾಣೆಗೆ ಎಳೆತಂದಿದ್ದರು.


ಆದರೆ ಠಾಣೆಯಲ್ಲಿ ಆರೋಪಿಯನ್ನು ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಸದೆ ಆತನಿಂದಲೇ ಹಣ ಪಡೆದು ದೂರನ್ನೂ ದಾಖಲಿಸದೇ ಬಿಡುಗಡೆ ಮಾಡಲಾಗಿತ್ತು. ಠಾಣೆಯ ಇನ್ಸ್ ಪೆಕ್ಟರ್ ಮುತ್ತುರಾಜ್ ಮತ್ತು ಕೆಲವು ಸಿಬಂದಿ ಕೃತ್ಯದಲ್ಲಿ ಶಾಮೀಲಾಗಿದ್ದರು. ಈ ಕುರಿತು ಠಾಣೆಯ ಸಿಬಂದಿಯೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಪತ್ರ ಬರೆದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್, ಈ ಬಗ್ಗೆ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಕಮಿಷನರ್ ಸತೀಶ್ ಕುಮಾರ್ ಅವರಿಗೆ ತನಿಖೆಗೆ ಸೂಚಿಸಿದ್ದರು.
ಎಸಿಪಿ ಸತೀಶ್ ಕುಮಾರ್ ಪ್ರಕರಣ ಬಗ್ಗೆ ಎಲ್ಲ ಸಿಬಂದಿಯನ್ನೂ ವಿಚಾರಣೆ ನಡೆಸಿದಾಗ ಆರೋಪದಲ್ಲಿ ಸತ್ಯಾಂಶ ಕಂಡುಬಂದಿದೆ ಎಂದು ವರದಿ ನೀಡಿದ್ದರು. ವರದಿ ಆಧರಿಸಿ ಠಾಣೆಯ ಇನ್ಸ್ಪೆಕ್ಟರ್ ಮುತ್ತುರಾಜ್, ಪಿಎಸ್ಐ ಉಮೇಶ್, ಎಎಸ್ಐಗಳಾದ ಮಹೇಶ್ ಹಾಗೂ ಫೈರೋಜ್ ಖಾನ್, ಹೆಡ್ ಕಾನ್ಸ್ಟೇಬಲ್ ಮಂಜುನಾಥ್, ಕಾನ್ಸ್ಟೇಬಲ್ ಬಸವರಾಜ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.
Bangalore Ramamurthy Nagar police station inspector Muthuraj and five others suspended over corruption. The staff of the police station had recently sent an unsigned letter to the police commissioner listing out numerous allegations about Muthuraj.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm