ಬ್ರೇಕಿಂಗ್ ನ್ಯೂಸ್
05-12-24 10:50 pm HK News Desk ಕರ್ನಾಟಕ
ಬೆಳಗಾವಿ, ಡಿ 05: ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ವಿಜಯೇಂದ್ರ ಗಂಭೀರವಾಗಿ ಕೆಲಸ ಮಾಡುವುದು ಒಳ್ಳೆಯದು. ಹುಡುಗಾಟದ ಬುದ್ಧಿ, ವಯಸ್ಸು ಸಣ್ಣದಿರೋದ್ರಿಂದ ಆ ಸ್ಥಾನಕ್ಕೆ ಅವರು ಲಾಯಕ್ಕಲ್ಲ. ಅಧ್ಯಕ್ಷ ಸ್ಥಾನ ಬಿಟ್ಟು ಕೊಡಲಿ ಎಂದು ಮೊನ್ನೆ ದೆಹಲಿಯಲ್ಲೂ ನಾನು ಹೇಳಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೆ ವಾಗ್ದಾಳಿ ನಡೆಸಿದರು.
ದೆಹಲಿ ಪ್ರವಾಸ ಮುಗಿಸಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಂದು ಸಂಜೆ ಬಂದಿಳಿದ ಅವರು ಮಾಧ್ಯಮದವರ ಜೊತೆ ಮಾತನಾಡಿದರು.
ಜಂಟಿ ಸದನ ಸಮಿತಿ ಅಧ್ಯಕ್ಷರಿಗೆ ನಮ್ಮ ವರದಿ ಸಲ್ಲಿಸಲಾಗಿದೆ. ನಮ್ಮ ತಂಡಕ್ಕೆ ಶಹಬ್ಬಾಷ್ಗಿರಿ ಕೊಟ್ಟಿದ್ದಾರೆ. ಶೀಘ್ರದಲ್ಲೇ ಎರಡನೇ ಹಂತದ ಹೋರಾಟ ಆರಂಭಿಸುತ್ತೇವೆ ಎಂದು ಎಚ್ಚರಿಸಿದರು.
ಈಗಾಗಲೇ ಕಾರಜೋಳ ಅವರ ಮೂಲಕ ವರದಿ ಸಲ್ಲಿಸಲಾಗಿದೆ ಎಂಬ ವಿಜಯೇಂದ್ರ ಹೇಳಿಕೆಗೆ, ಕಾರಜೋಳ ಇಲ್ಲೇ ಇದ್ದರು ಕೇಳಿದ್ದೀರಾ ಎಂದು ಮರು ಪ್ರಶ್ನಿಸಿದರು.
ಯಡಿಯೂರಪ್ಪನವರ ಮಗ ಎನ್ನುವ ಕಾರಣಕ್ಕೆ ರಾಜ್ಯಾಧ್ಯಕ್ಷರಾಗಿದ್ದಾರೆ. ಯಡಿಯೂರಪ್ಪ ಬಹಳಷ್ಟು ಹೋರಾಟ ಮಾಡಿದ ಬಳಿಕ ಆ ಸ್ಥಾನಕ್ಕೆ ತಲುಪಿದ್ದರು. ಅವರ ಮಗನಾಗಿ ಆ ಸ್ಥಾನ ತಲುಪಿದ್ದು ವ್ಯರ್ಥ. ಯಡಿಯೂರಪ್ಪನವರ ಹಿರಿತನ, ತ್ಯಾಗ ಮತ್ತು ಹೋರಾಟ ಮಂಕಾಗುತ್ತಿದೆ. ಈಗ ಅಧಿಕಾರ ಬಿಟ್ಟು ಕೊಟ್ಟು ಮುಂದೆ ಅನುಭವ ಪಡೆದ ಬಳಿಕ ಮತ್ತೆ ಅಧ್ಯಕ್ಷರಾಗಲಿ ಎಂದು ಸಲಹೆ ನೀಡಿದರು.
ವರಿಷ್ಠರ ತೀರ್ಮಾನಕ್ಕೆ ನಾವೆಲ್ಲಾ ಬದ್ಧ. ಆದರೆ, ಆ ಹುಡುಗ ವಿಜಯೇಂದ್ರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಲಾಯಕ್ ಅಲ್ಲ ಎಂಬುದನ್ನು ನಾನು ಪದೇ ಪದೇ ಹೇಳಲು ಪ್ರಯತ್ನಿಸುತ್ತಿದ್ದೇನೆ. ಯಾವುದೋ ಒಂದು ಸಮಯದಲ್ಲಿ ಏನೋ ತಿಳಿದು ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ವಿಜಯೇಂದ್ರ ನಡವಳಿಕೆ ಬಗ್ಗೆ ಹೈಕಮಾಂಡ್ಗೆ ತಿಳಿಸಿಕೊಟ್ಟಿದ್ದೇವೆ. ಮುಂದೆ ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡಬೇಕಿದೆ. ಇನ್ನು ಅಧ್ಯಕ್ಷರ ಬದಲಾವಣೆ ಬಗ್ಗೆ ಮುಂದೆ ನೋಡೋಣ. ಅದನ್ನು ಮಾಧ್ಯಮಗಳ ಮುಂದೆ ಮಾತಾಡಲಾಗದು ಎಂದರು.
Ramesh Jarkiholi slams B. Y. Vijayendra, says he's unfit to be the president. Says hes a small kid, who doesn't know any politics like his father.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm