ಬ್ರೇಕಿಂಗ್ ನ್ಯೂಸ್
06-12-24 11:16 am HK News Desk ಕರ್ನಾಟಕ
ಕಲಬುರಗಿ, ಡಿ 06: ಆನ್ಲೈನ್ ಜೂಜಾಟದ ವ್ಯಸನಕ್ಕೆ ಸಿಲುಕಿಕೊಂಡಿದ್ದ ವಿದ್ಯಾರ್ಥಿ ಅದಕ್ಕಾಗಿ ಸಾಲ ಮಾಡಿಕೊಂಡು ಅದನ್ನು ತೀರಿಸಲಾಗದೇ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಗರದ ಜಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಅಂತಿಮ ವರ್ಷದಲ್ಲಿ ಓದುತ್ತಿದ್ದ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಡೋಣಗಾಪುರ ಗ್ರಾಮದ ನಿವಾಸಿ ಸೋಮನಾಥ ಚಿದ್ರಿ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಆನ್ಲೈನ್ ಜೂಜಿನ ಮೋಹಕ್ಕೆ ಬಿದ್ದಿದ್ದ ಸೋಮನಾಥ 80 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದ. ಒಂದಷ್ಟು ಹಣವನ್ನು ಶೇ 4ರಿಂದ ಶೇ 10ರ ಬಡ್ಡಿ ದರದಲ್ಲಿ ತಂದಿದ್ದ. ನಂತರ ಸಾಲಗಾರರ ಕಾಟದಿಂದ ಬೇಸತ್ತು ನಗರದ ವೀರಶೈವ ಹಾಸ್ಟೆಲ್ ಸಮೀಪದ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗ ಸಾಲ ಮಾಡಿರುವುದು ಗೊತ್ತಿದ್ದ ತಂದೆ ಸತೀಶಕುಮಾರ್ ಒಂದಷ್ಟು ಸಾಲ ತೀರಿಸುತ್ತಿದ್ದರು. ಮತ್ತೆ ತಂದೆಗೆ ಕರೆ ಮಾಡಿ 30 ಸಾವಿರ ಕಳಿಸುವಂತೆ ಬೇಡಿಕೆ ಸಲ್ಲಿಸಿದ್ದ. ನಾಳೆ ಕೊಡುವುದಾಗಿ ಹೇಳಿದ್ದರು. ಅಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗೊತ್ತಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ, 'ಆನ್ಲೈನ್ ಜೂಜಾಟದಿಂದ 70 ಲಕ್ಷದಿಂದ 80 ಲಕ್ಷ ಹಣ ಕಳೆದುಕೊಂಡಿದ್ದ ಎಂದು ಪೋಷಕರು ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ' ಎಂದರು.
Kalaburagi 22 year old youth commit suicide after loss of 80 lakhs in online gambling. Disease as be identified as Somnath chidri.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am